
ಪ್ರಜಾವಾಣಿ ವಾರ್ತೆ
ಬೆಳ್ತಂಗಡಿ: ‘ಶಿವಗಿರಿಯ ಶಾಖಾ ಮಠಕ್ಕೆ ರಾಜ್ಯದಲ್ಲಿ 5 ಎಕರೆ ಗುರುತಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದು, ಆ ಮಠ ಬೆಳ್ತಂಗಡಿ ತಾಲ್ಲೂಕಿನಲ್ಲಿ ಆಗುವಂತಾಗಬೇಕು. ತಾಲ್ಲೂಕಿನ ಪ್ರಮುಖ ವೃತ್ತದಲ್ಲಿ ಬಿಲ್ಲವ ಸಮಾಜದ ಶಕ್ತಿಯಾಗಿದ್ದ ದಿ.ಕೆ.ವಸಂತ ಬಂಗೇರ ಅವರ ಪುತ್ಥಳಿ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು’ ಎಂದು ಬೆಳ್ತಂಗಡಿ ಬೆಸ್ಟ್ ಫೌಂಡೇಷನ್ ಅಧ್ಯಕ್ಷ ರಕ್ಷಿತ್ ಶಿವರಾಂ ಹೇಳಿದರು.
ಶ್ರೀಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಯುವ ಬಿಲ್ಲವ ವೇದಿಕೆ ಮತ್ತು ಬಿಲ್ಲವ ಮಹಿಳಾ ವೇದಿಕೆ ಸಹಕಾರದೊಂದಿಗೆ ಬೆಳ್ತಂಗಡಿ ಜೂನಿಯರ್ ಕಾಲೇಜು ಮೈದಾನದ ದಿ.ಕೆ.ವಸಂತ ಬಂಗೇರ ಸಭಾ ವೇದಿಕೆಯಲ್ಲಿ ನಡೆದ 12ನೇ ವರ್ಷದ ಕೋಟಿ-ಚೆನ್ನಯ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ.ಸುವರ್ಣ ಮಾತನಾಡಿ, ‘ಕ್ರೀಡಾ ಮನೋಭಾವ ಹಾಗೂ ಸಂಘಟನಾ ಶಕ್ತಿ ಬೆಳೆಸುವ ಉದ್ದೇಶದಿಂದ ಜಾಗತಿಕ ಬಿಲ್ಲವರ ಕ್ರೀಡಾಕೂಟ ಜ.16ರಂದು ಮಂಗಳೂರಿನಲ್ಲಿ ನಡೆಯಲಿದೆ’ ಎಂದರು.
ಬಿಜೆಪಿ ಜಿಲ್ಲಾ ಘಟಕದ ಉಧ್ಯಕ್ಷ ಜಯಂತ ಕೋಟ್ಯಾನ್ ಮಾತನಾಡಿದರು.
ಸಂಘದ ಅಧ್ಯಕ್ಷ ಜಯ ವಿಕ್ರಮ್ ಕಲ್ಲಾಪು ಅಧ್ಯಕ್ಷತೆ ವಹಿಸಿದ್ದರು.
ಕ್ರೀಡಾ ಜ್ಯೋತಿಯನ್ನು ಬಿಲ್ಲವ ಮಹಿಳಾ ವೇದಿಕೆ ಸ್ಥಾಪಕಾಧ್ಯಕ್ಷೆ ಸುಜಿತಾ ವಿ.ಬಂಗೇರ ಹಸ್ತಾಂತರಿಸಿದರು. ಕ್ರೀಡಾ ವಾಹನ ಜಾಥಾಕ್ಕೆ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ಚಾಲನೆ ನೀಡಿದರು. ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಧ್ವಜಾರೋಹಣ ನೆರವೇರಿಸಿದರು.
ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಡಾ.ರಾಜಾರಾಮ್ ಕೆ.ಬಿ., ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ, ಎನ್.ಇ.ಇ.ಟಿ. ನರ್ಸಿಂಗ್ ಕಾಲೇಜು ಗುರುವಾಯನಕೆರೆಯ ವ್ಯವಸ್ಥಾಪಕ ನಿರ್ದೇಶಕ ಸಜಿ ಆರ್., ಗೆಜ್ಜೆಗಿರಿ ಯಕ್ಷಗಾನ ಮಂಡಳಿ ತಾಲ್ಲೂಕು ಸಂಚಾಲಕ ನಿತ್ಯಾನಂದ ನಾವರ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್, ಬಂಟ್ವಾಳ ಪ್ರಾದೇಶಿಕ ಸಾರಿಗೆ ಅಧಿಕಾರಿ ಚರಣ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಯೋಗಿಶ್ ಕುಮಾರ್ ನಡಕ್ಕರ, ಹೆಚ್ಚುವರಿ ಸರ್ಕಾರಿ ವಕೀಲ ಮನೋಹರ್ ಕುಮಾರ್, ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ, ಸಂಘದ ಮಾಜಿ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ, ಕ್ರೀಡಾ ನಿರ್ದೇಶಕ ತನುಷ್ ಜೆ.ಹೆರಾಜೆ, ಯುವ ಬಿಲ್ಲವ ವೇದಿಕೆ ಕ್ರೀಡಾ ಕಾರ್ಯದರ್ಶಿ ದೇವಿಪ್ರಸಾದ್ ಬರಮೇಲು, ಸದಾನಂದ ಪೂಜಾರಿ ಉಂಗಿಲ ಬೈಲು, ಶಿರ್ಲಾಲು ಸಿ.ಎ.ಬ್ಯಾಂಕ್ ಅಧ್ಯಕ್ಷ ಸುಧೀರ್ ಆರ್.ಸುವರ್ಣ, ರೂಪೇಶ್ ಕೆ. ಧರ್ಮಸ್ಥಳ ಭಾಗವಹಿಸಿದ್ದರು.
ವಿಶ್ವಕಪ್ ವಿಜೇತ ಕಬಡ್ಡಿ ತಂಡದ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಸಮಾಜದ 6 ಜೋಡಿ ಅವಳಿಗಳನ್ನು ಗೌರವಿಸಲಾಯಿತು.
ಮಹಿಳಾ ಬಿಲ್ಲವ ವೇದಿಕೆಯ ಸದಸ್ಯೆ ವಿಜಯ ಹರಿದಾಸ್ ಪ್ರಾರ್ಥಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ನಿತೀಶ್ ಎಚ್.ಕುಕ್ಕೇಡಿ ಸ್ವಾಗತಿಸಿದರು. ಸತೀಶ್ ಹೊಸ್ಮಾರ್ ನಿರೂಪಿಸಿದರು. ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಪ್ರಸಾದ್ ಎಂ.ಕೆ. ವಂದಿಸಿದರು.
ಮಧ್ಯಾಹ್ನ ನಡೆದ ಸನ್ಮಾನ ಸಮಾರಂಭದಲ್ಲಿ ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕರ್ನಾಟಕ ರಾಜ್ಯ ಸಹಕಾರಿ ರತ್ನ ಪುರಸ್ಕೃತ ಸತೀಶ್ ಕಾಶಿಪಟ್ಣ ಸೇರಿದಂತೆ ಸಾಧಕರನ್ನು ಸನ್ಮಾನಿಸಲಾಯಿತು.
ಬೆಳ್ತಂಗಡಿ ಶ್ರೀಗುರು ನಾರಾಯಣ ಸಭಾ ಭವನದಿಂದ ಕ್ರೀಡಾಂಗಣದವರೆಗೆ ವಾಹನ ಜಾಥಾ ನಡೆಯಿತು. ಮಹಿಳಾ ಬಿಲ್ಲವ ವೇದಿಕೆಯಿಂದ ಕ್ರೀಡಾಂಗಣದಲ್ಲಿ ವಧು ವರರ ಅನ್ವೇಷಣೆ ನಡೆಯಿತು. ವಾಲಿಬಾಲ್, ಕಬಡ್ಡಿ, ಹಗ್ಗಜಗ್ಗಾಟ, ಥ್ರೋಬಾಲ್, ಬ್ಯಾಡ್ಮಿಂಟನ್, ಗುಂಡು ಎಸೆತ, ಗೋಣಿ ಚೀಲ ಓಟ ಸ್ಪರ್ಧೆಗಳು ನಡೆದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.