ADVERTISEMENT

ಪ್ರಧಾನಿ ಮೋದಿಗೆ ಶ್ರೀಕೃಷ್ಣ, ಪರಶುರಾಮನ ಮೂರ್ತಿ ಉಡುಗೊರೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2022, 10:32 IST
Last Updated 2 ಸೆಪ್ಟೆಂಬರ್ 2022, 10:32 IST
ಗೋಲ್ಡ್ ಫಿಂಚ್ ಮೈದಾನದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ
ಗೋಲ್ಡ್ ಫಿಂಚ್ ಮೈದಾನದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ   

ಮಂಗಳೂರು: ಸಮಾವೇಶ ಆಯೋಜನೆಗೊಂಡಿರುವ‌ನಗರದ ಗೋಲ್ಡ್ ಫಿಂಚ್ ಮೈದಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಂತೆ ಜನರು ಕರತಾಡನದ ಮೂಲಕ ಸ್ವಾಗತಿಸಿದರು.

ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ಅವರು ಮೋದಿ ಅವರಿಗೆ ಹಾರ, ಪೇಟ ತೊಡಿಸಿ ಸ್ವಾಗತಿಸಿದರು.‌ ಉಡುಪಿ ಶ್ರೀಕೃಷ್ಣ ನ ಮೂರ್ತಿ ನೀಡಿದರು.

ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಲ್ಲಿಗೆ ಹಾರ ಹಾಕಿ ಸ್ವಾಗತಿಸಿದರೆ, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರು ಪರಶುರಾಮನ ಮೂರ್ತಿ ನೀಡಿದರು.

ADVERTISEMENT

ಈ ವೇಳೆ ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.