ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾಲಯದ ಸೋಶಿಯಲ್ ಸೈನ್ಸ್ ಅಂಡ್ ಹ್ಯುಮಾನಿಟಿಸ್, ಕಂಪ್ಯೂಟರ್ ಸೈನ್ಸ್ ಅಂಡ್ ಇನ್ಫರ್ಮೇಶನ್ ಸೈನ್ಸ್, ಏವಿಯೇಶನ್ ಸ್ಟಡೀಸ್ ಕಾಲೇಜುಗಳ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮ ಸೋಮವಾರ ಪಾಂಡೇಶ್ವರದ ಸಿಟಿ ಕ್ಯಾಂಪಸ್ನಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿದ್ದ ಸಹ ಕುಲಾಧಿಪತಿ ಡಾ. ಎ. ಶ್ರೀನಿವಾಸ್ ರಾವ್ ಮಾತನಾಡಿ, ‘ವಿದ್ಯಾರ್ಥಿಗಳಿಗೆ ನಿಜ ಜೀವನದಲ್ಲಿ ಹಾಗೂ ಸಾಮಾಜಿಕವಾಗಿ ಬೇಕಾಗಿರುವ ಅಂಶಗಳು ವಿಶ್ವವಿದ್ಯಾಲಯದ ಪಠ್ಯಕ್ರಮದಲ್ಲಿ ಅಳವಡಿಸಲಾಗಿದೆ’ ಎಂದರು. ಕುಲಪತಿ ಡಾ. ಪಿ. ಎಸ್ ಐತಾಳ್, ಶ್ರೀನಿವಾಸ್ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳನ್ನು ಮುಂದಿನ ಸಮಾಜಕ್ಕಾಗಿ ರೂಪಿಸುತ್ತಿದೆ ಎಂದರು. ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಲಾಯಿತು.
ಡೀನ್ಗಳಾದ ಡಾ. ಲವೀನಾ ಡಿಮೆಲ್ಲೋ, ಪ್ರೊ. ಸುಬ್ರಹ್ಮಣ್ಯ ಭಟ್, ಪ್ರೊ. ಪವಿತ್ರಾ ಕುಮಾರಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.