ADVERTISEMENT

ಸುಬ್ರಹ್ಮಣ್ಯ: ಕುಕ್ಕೆಯಲ್ಲಿ ವಿಶೇಷ ಪಂಚಾಮೃತ ಮಹಾಭಿಷೇಕ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2020, 13:17 IST
Last Updated 5 ಆಗಸ್ಟ್ 2020, 13:17 IST
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ   

ಸುಬ್ರಹ್ಮಣ್ಯ: ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿಪೂಜೆ ಪ್ರಯುಕ್ತ ಬುಧವಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಕಾರದ ಆದೇಶದಂತೆ ವಿಶೇಷ ಪೂಜೆ ನೆರವೇರಿತು.

ದೇವರಿಗೆ ವಿಶೇಷ ಪಂಚಾಮೃತ ಮಹಾಭಿಷೇಕ ಮಾಡಲಾಯಿತು. ಬಳಿಕ ವಿಶೇಷ ಪ್ರಾರ್ಥನೆ ಸಲ್ಲಿಸಿ, ಮಹಾಪೂಜೆ ನಡೆಸಲಾಯಿತು.

ದೇವಳದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್, ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಶಿಷ್ಟಾಚಾರ ವಿಭಾಗದ ಕೆ.ಎಂ.ಗೋಪಿನಾಥ್ ನಂಬೀಶ, ಕುಕ್ಕೆ ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಮೋನಪ್ಪ ಮಾನಾಡು,ಅರ್ಚಕರಾದ ಸತ್ಯನಾರಾಯಣ ನೂರಿತ್ತಾಯ ಮತ್ತು ರಮೇಶ ಆಸ್ರಣ್ಣ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.