ADVERTISEMENT

ಆಸ್ಕರ್ ಆರೋಗ್ಯಕ್ಕೆ ಪ್ರಾರ್ಥಿಸಿ ಪೂಜೆ

​ಪ್ರಜಾವಾಣಿ ವಾರ್ತೆ
Published 22 ಜುಲೈ 2021, 13:29 IST
Last Updated 22 ಜುಲೈ 2021, 13:29 IST
ಆಸ್ಕರ್ ಫರ್ನಾಂಡಿಸ್ ಆರೋಗ್ಯಕ್ಕೆ ಪ್ರಾರ್ಥಿಸಿ ಕುದ್ರೋಳಿ ದೇವಾಲಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೂಜೆ ಸಲ್ಲಿಸಿದರು.
ಆಸ್ಕರ್ ಫರ್ನಾಂಡಿಸ್ ಆರೋಗ್ಯಕ್ಕೆ ಪ್ರಾರ್ಥಿಸಿ ಕುದ್ರೋಳಿ ದೇವಾಲಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೂಜೆ ಸಲ್ಲಿಸಿದರು.   

ಮಂಗಳೂರು: ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಆರೋಗ್ಯ ಸುಧಾರಣೆಗೆ ಪ್ರಾರ್ಥಿಸಿ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಗುರುವಾರ ವಿಶೇಷ ಪೂಜೆ ಸಲ್ಲಿಸಲಾಯಿತು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಹರೀಶ್ ಕುಮಾರ್, ಮಾಜಿ ಸಚಿವರಾದ ಬಿ. ರಮಾನಾಥ ರೈ, ಅಭಯಚಂದ್ರ, ಮಾಜಿ ಶಾಸಕರಾದ ಜೆ. ಆರ್. ಲೋಬೊ, ಐವನ್ ಡಿಸೋಜಾ, ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್, ಪಕ್ಷದ ನಾಯಕರಾದ ಮಿಥುನ್ ರೈ, ಶಾಲೆಟ್ ಪಿಂಟೊ, ಶಶಿಧರ ಹೆಗ್ಡೆ, ಬಿ.ಜಿ. ಸುವರ್ಣ, ರಾಜಶೇಖರ್ ಕೋಟ್ಯಾನ್, ಮೊಹಮ್ಮದ್ ಮೋನು, ಲುಕ್ಮಾನ್ ಬಂಟ್ವಾಳ, ಅಬ್ದುಲ್ ರವೂಫ್, ಅನಿಲ್ ಕುಮಾರ್, ಸದಾಶಿವ ಶೆಟ್ಟಿ ,ಟಿ.ಕೆ ಸುಧೀರ್, ಜಯಶೀಲಾ ಅಡ್ಯಂತಾಯ, ಶುಭೋದಯ ಆಳ್ವ, ನೀರಜ್ ಪಾಲ್, ಲಾವಣ್ಯ ಬಲ್ಲಾಳ್, ಪ್ರಕಾಶ್ ಸಾಲ್ಯಾನ್, ಬೇಬಿ ಪೂಜಾರಿ, ರಮಾನಂದ್ ಪೂಜಾರಿ, ಅಪ್ಪಿ, ಶಾಂತಲ ಗಟ್ಟಿ, ರಕ್ಷಿತ್ ಶಿವರಾಮ್, ಶಶಿಕಲಾ ಕದ್ರಿ, ಹೊನ್ನಯ್ಯ, ದುರ್ಗಾಪ್ರಸಾದ್, ನಿತ್ಯಾನಂದ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT