ಮೂಡುಬಿದಿರೆ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ರಾಜ್ಯಮಟ್ಟದ ಯಕ್ಷರೂಪಕ ಸ್ಪರ್ಧೆಯಲ್ಲಿ ಮುಲ್ಲಕಾಡು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪಂಜದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ತಂಡಗಳು ಪ್ರಶಸ್ತಿ ಜಯಿಸಿದವು.
ರಾಕೇಶ್ ರೈ ಅಡ್ಕ ನೇತೃತ್ವದ ಮುಲ್ಲಕಾಡು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ತಂಡವು ‘ದಶಾವತಾರ ಆಖ್ಯಾನ’ಕ್ಕೆ ಪ್ರಥಮ ಪ್ರಶಸ್ತಿ ಪಡೆಯಿತು. ಗುರುಪುರದ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ದೀವಿತ್ ಎಸ್. ಕೆ. ಪೆರಾಡಿ ನೇತೃತ್ವದ ತಂಡವು ’ರಾಮಾಯಣ ದರ್ಶನಂ’ ಆಖ್ಯಾನಕ್ಕೆ ದ್ವಿತೀಯ ಹಾಗೂ ಹರೇಕಳದ ರಾಮಕೃಷ್ಣ ಅನುದಾನಿತ ಪ್ರೌಢಶಾಲೆಯ ಅಶ್ವತ್ಥ್ ಮಂಜನಾಡಿ ನೇತೃತ್ವದ ತಂಡವು ‘ಕ್ಷೀರಾಬ್ಧಿ ಮಥನ’ ಆಖ್ಯಾನಕ್ಕೆ ತೃತೀಯ ಪ್ರಶಸ್ತಿ ಪಡೆಯಿತು. ಗಿರೀಶ್ ಗಡಿಕಲ್ಲು ನೇತೃತ್ವದ ಪಂಜದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ತಂಡವು ‘ವಿಶ್ವರೂಪ’ ಆಖ್ಯಾನಕ್ಕೆ ಪ್ರಥಮ ಪ್ರಶಸ್ತಿ ಪಡೆಯಿತು.
ಮಂಚಿ ಕೊಲ್ನಾಡುವಿನ ಸರ್ಕಾರಿ ಪ್ರೌಢಶಾಲೆಯ ಅಶ್ವತ್ಥ್ ಮಂಜನಾಡಿ ನೇತೃತ್ವದ ತಂಡವು ಲಕ್ಷ್ಮೀ ಸ್ವಯಂವರ ಆಖ್ಯಾನಕ್ಕೆ ದ್ವಿತೀಯ ತಂಡ ಪ್ರಶಸ್ತಿ ಹಾಗೂ ಗುರುಪುರ ಬಿ. ಆರ್. ಅಂಬೇಡ್ಕರ್ ವಸತಿ ಶಾಲೆ ದೀವಿತ್ ಎಸ್. ಕೆ ಪೆರಾಡಿ ನೇತೃತ್ವದ ತಂಡವು ಕೃಷ್ಣ ಲೀಲಾಮೃತಂ ಆಖ್ಯಾನಕ್ಕೆ ತೃತೀಯ ತಂಡ ಪ್ರಶಸ್ತಿ ಪಡೆಯಿತು. ವಿಜೇತ ತಂಡಗಳಿಗೆ ಪ್ರಥಮ ₹30 ಸಾವಿರ ದ್ವಿತೀಯ ₹20 ಸಾವಿರ ಹಾಗೂ ತೃತೀಯ ₹15 ಸಾವಿರ ನಗದು ಬಹುಮಾನ ನೀಡಲಾಯಿತು. ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಾಜೆಯ ರಕ್ಷಿತ್ ಶೆಟ್ಟಿ ಪಡ್ರೆ ತಂಡಕ್ಕೆ ಶಿಸ್ತಿನ ತಂಡ ಪ್ರಶಸ್ತಿಗಾಗಿ ₹10 ಸಾವಿರ ನಗದು ಬಹುಮಾನ ಲಭಿಸಿತು.
ಯಕ್ಷ ರಂಗು ಮುಖ ವರ್ಣಿಕೆ ಸ್ಪರ್ಧೆಯಲ್ಲಿ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್ ಬ್ರಹ್ಮಾವರದ ವಿದ್ಯಾರ್ಥಿನಿ ಮಾನ್ಯ ಜೆ ಭಂಡಾರಿ ಪ್ರಥಮ, ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿಯ ವಿದ್ಯಾರ್ಥಿನಿ ಶ್ರಾವ್ಯ ಯು. ದ್ವಿತಿಯ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಾಜೆಯ (ಕಿನ್ನಿಗೋಳಿ) ಸಾತ್ವಿಕ್ ತೃತೀಯ ಸ್ಥಾನ ಪಡೆದರು.
ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ವಿಶ್ವ ಮಂಗಳ ಪ್ರೌಡಶಾಲೆ ಕೊಣಾಜೆಯ ವಿದ್ಯಾರ್ಥಿ ಅಭಿನವ ಭಟ್ಟ ಎನ್. ಪ್ರಥಮ, ತಲಪಾಡಿಯ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್, ದೇವಿ ನಗರ ವಿದ್ಯಾರ್ಥಿ ಪ್ರಯಾಗ ಜಿ. ಕೊಟ್ಟಾರಿ ದ್ವಿತೀಯ, ದುರ್ಗಾಪರಮೇಶ್ವರಿ ಹಿರಿಯ ಪ್ರಾಥಮಿಕ ಶಾಲೆ, ಧರ್ಮತಡ್ಕ(ಕಾಸರಗೋಡು)ದ ವಿದ್ಯಾರ್ಥಿ ಸ್ಕಂದ ಪ್ರಸಾದ ಎ. ತೃತೀಯ ಸ್ಥಾನ ಪಡೆದರು.
ಯಕ್ಷಲೇಖನ ಸ್ಪರ್ಧೆಯಲ್ಲಿ ಮುಜಿಲ್ನಾಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳದ ವಿದ್ಯಾರ್ಥಿನಿ ಸೌಜನ್ಯಾ ಪ್ರಥಮ, ಜೈನ ಪ್ರೌಢಶಾಲೆ ಮೂಡುಬಿದಿರೆಯ ವಿದ್ಯಾರ್ಥಿನಿ ಅಸ್ಮಿ ದ್ವಿತೀಯ, ಡಾ, ರಾಮಣ್ಣ ಶೆಟ್ಟಿ ಮೆಮೋರಿಯಲ್ ಸ್ಕೂಲ್ ತೋಕೂರು, (ಹಳೆಯಂಗಡಿ)ನ ವಿದ್ಯಾರ್ಧಿನಿ ಸಾದ್ವಿ ತೃತೀಯ ಸ್ಥಾನ ಪಡೆದರು.
ಯಕ್ಷ ಸ್ವಗತ ಮಾತುಗಾರಿಕೆ ಸ್ಪರ್ಧೆಯಲ್ಲಿ ಮಾರುತಿ ವಿದ್ಯಾಕೇಂದ್ರದ ವಿದ್ಯಾರ್ಧಿ ಸಂದೃತ್ ಶರ್ಮಾ ಪ್ರಥಮ, ರಾಮಕೃಷ್ಣ ಪ್ರೌಢಶಾಲೆ ಹರೇಕಳದ ವಿದ್ಯಾರ್ಥಿನಿ ಲಾವಣ್ಯಾ ದ್ವಿತೀಯ, ಶಾರದಾ ಶುಭೋದಯ ವಿದ್ಯಾಲಯ ಮೂಡುಶೆಡ್ಡೆಯ ವಿದ್ಯಾರ್ಥಿ ಚಿನ್ಮಯ ಕೃಷ್ಣ ಉಳಿತ್ತಾಯ ತೃತೀಯ ಸ್ಥಾನ ಪಡೆದರು.
ಯಕ್ಷಜ್ಞಾನ ಪರೀಕ್ಷಾ ಪಂಥ ಸ್ಪರ್ಧೆಯಲ್ಲಿ ಮಚ್ಚಿನದ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿನಿ ಸಾತ್ವಿ ಪ್ರಥಮ, ಉಡುಪಿ ವಳಕಾಡಿನ ಜಿಎಚ್ಎಸ್ನ ಮೇದಾ ದ್ವಿತೀಯ, ಶಾರದಾ ಗಣಪತಿ ವಿದ್ಯಾಕೇಂದ್ರ ಪುಣ್ಯಕೋಟಿ ನಗರದ ವಿದ್ಯಾರ್ಥಿನಿ ಸುಧನ್ವಾ ಕೆ. ತೃತೀಯ ಸ್ಥಾನ ಪಡೆದರು.
ಯಕ್ಷ ರಸಪ್ರಶ್ನೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ಮಚ್ಚಿನದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರ ತಂಡ ಪ್ರಥಮ, ಎಸ್.ಎನ್.ವಿ. ಪ್ರೌಢಶಾಲೆ ಹಿರಿಯಂಗಡಿ ಹರೇಕಳದ ವಿದ್ಯಾರ್ಥಿನಿಯರ ತಂಡ ದ್ವಿತೀಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನದ ವಿದ್ಯಾರ್ಥಿಗಳ ತಂಡ ತೃತೀಯ ಸ್ಥಾನ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.