ಪುತ್ತೂರು: ಇಲ್ಲಿನ ಉಪ ವಿಭಾಗಾಧಿಕಾರಿ, ಉಪವಿಭಾಗಾಗದ ಸಹಾಯಕ ದಂಡಾಧಿಕಾರಿ ಹೊರಡಿಸಿದ್ದ ಎ.ಆರ್.ವಾರಿಯರ್ಸ್ ಮುಖ್ಯಸ್ಥ ಪ್ರಜ್ವಲ್ ರೈ ಪಾತಾಜೆ ಅವರ ಗಡಿಪಾರು ಆದೇಶಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಪ್ರಜ್ವಲ್ ರೈ ಪಾತಾಜೆ ವಿರುದ್ಧ ಪುತ್ತೂರು ನಗರ ಠಾಣಾ ವ್ಯಾಪ್ತಿ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕಾನೂನು ಉಲ್ಲಂಘನೆ ಮಾಡಿರುವ ಪ್ರಕರಣಗಳು ದಾಖಲಾಗಿದ್ದು, ಈ ಕಾರಣದಿಂದ ಅವರನ್ನು ಬಳ್ಳಾರಿ ಜಿಲ್ಲೆಯ ಬ್ರೂಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲು ಶಿಫಾರಸು ಮಾಡಲಾಗಿತ್ತು. ಈ ಗಡಿಪಾರು ಆದೇಶಕ್ಕೆ ಸಂಬಂಧಿಸಿ ಪುತ್ತೂರಿನ ವಕೀಲರಾದ ಧನಂಜಯಕುಮಾರ್ ಮತ್ತು ಚಿನ್ಮಯ್ ರೈ ಈಶ್ವರಮಂಗಲ ನ್ಯಾಯಾಲಯದಲ್ಲಿ ವಾದಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.