ಸುಬ್ರಹ್ಮಣ್ಯ: ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಾಲ್ಕನೇ ವರ್ಷದ ಭತ್ತದ ಸಾಗುವಳಿ ನಡೆಯಿತು. ಜೇಸಿಐ ಪಂಜ ಪಂಚಶ್ರೀಯ ಬೆಳ್ಳಿ ಹಬ್ಬದ ಸ್ಮರಣೆ ಅಂಗವಾಗಿ ದಾನಿಗಳ ಸಹಾಯದಿಂದ ನಿರ್ಮಾಣಗೊಂಡ ದೇವಳದ ಗದ್ದೆಯಲ್ಲಿ ಸಾಗುವಳಿ ಮಾಡಲಾಯಿತು.
ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಕಾನತ್ತೂರು ಉದ್ಘಾಟಿಸಿದರು. ಪೈಂದೋಡಿ ಸುಬ್ರಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಗೌಡ ಕುದ್ವ, ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ಮ್ಯಾಲಪ್ಪ ಎಣ್ಮೂರು, ಧರ್ಮಣ್ಣ ನಾಯ್ಕ ಗರಡಿ, ಧರ್ಮಪಾಲ ಮರಕ್ಕಡ, ಮಾಲಿನಿ ಕುದ್ವ, ವ್ಯವಸ್ಥಾಪನ ಸಮಿತಿಯ ಗೌರವ ಸಲಹೆಗಾರರಾದ ಪರಮೇಶ್ವರ ಗೌಡ ಬಿಳಿಮಲೆ, ಸಾರ್ವಜನಿಕ ಆರಾಧನಾ ಸಮಿತಿಯ ಖಜಾಂಜಿ ಆನಂದ ಜಳಕದ ಹೊಳೆ, ಜೆಸಿಐ ಪಂಜ ಪಂಚಶ್ರೀ ಅಧ್ಯಕ್ಷ ವಾಚಣ್ಣ ಕೆರೆಮೂಲೆ, ಸ್ಥಾಪಕ ಅಧ್ಯಕ್ಷ ದೇವಪ್ರಸಾದ್ ಜಾಕೆ, ರಜತ ವರ್ಷದ ಅಧ್ಯಕ್ಷ ಶಿವಪ್ರಸಾದ್ ಹಾಲೆಮಜಲು, ಪೂರ್ವಾಧ್ಯಕ್ಷ ತೀರ್ಥಾನಂದ ಕೊಡಂಕೆರಿ, ನಾಗಮಣಿ ಕೆದಿಲ, ಸುದರ್ಶನ ಪಟ್ಟಾಜೆ ಸದಸ್ಯರಾದ ದೇವಿಪ್ರಸಾದ್ ಚಿಕ್ಮುಳಿ, ಗಗನ್ ಯೋಜನೆಯ ಕೃಷಿ ಯಂತ್ರೋಪಕರಣಗಳ ಬಾಡಿಗೆ ಸೇವಾಕೇಂದ್ರ ವ್ಯವಸ್ಥಾಪಕ ಬಾಲಕೃಷ್ಣ ಪಾಠಾಳಿ, ದೇವಳದ ಸಿಬ್ಬಂದಿ ಕೃಷ್ಣಪ್ಪ ಜಳಕದ ಹೊಳೆ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.