ADVERTISEMENT

ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷರಾಗಿ ಸುಧಾಕರ ಪೂಂಜ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2023, 7:17 IST
Last Updated 19 ಮಾರ್ಚ್ 2023, 7:17 IST
ಸುಧಾಕರ ಪೂಂಜ
ಸುಧಾಕರ ಪೂಂಜ   

ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷರಾಗಿ ಸುಧಾಕರ ಎಸ್. ಪೂಂಜ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಇತ್ತೀಚೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಗೌರವಾಧ್ಯಕ್ಷರಾಗಿ ಮಹಾಬಲ ಪೂಜಾರಿ ಕಡಂಬೋಡಿ ಪುನರಾಯ್ಕೆಗೊಂಡರು. ಸಂಚಾಲಕರಾಗಿ ವಿನಯ ಆಚಾರ್ಯ ಹೊಸಬೆಟ್ಟು, ಉಪಾಧ್ಯಕ್ಷರಾಗಿ ಎಂ.ಜಿ. ರಾಮಚಂದ್ರ ರಾವ್, ಲೀಲಾಧರ ಶೆಟ್ಟಿ ಕಟ್ಲ, ರವಿ ಶೆಟ್ಟಿ, ಪಿ. ಕೃಷ್ಣಮೂರ್ತಿ ಸುರತ್ಕಲ್, ನಾರಾಯಣ ಶೆಟ್ಟಿ ಕಟ್ಲ, ಪ್ರಧಾನ ಕಾರ್ಯದರ್ಶಿಯಾಗಿ ಬಾಳ ಗಂಗಾಧರ ಪೂಜಾರಿ ಚೇಳ್ಯಾರು, ಜೊತೆ ಕಾರ್ಯದರ್ಶಿಗಳಾಗಿ ಗುಣಶೇಖರ್ ಶೆಟ್ಟಿ, ಜಯ ದೇವಾಡಿಗ, ಸುಧಾಕರ ಶೆಟ್ಟಿ ಕಟ್ಲ, ಸತೀಶ್ ಶೆಟ್ಟಿ ಬಾಳಿಕೆ, ಅನಂತ್ ರಾಜ್ ಶೆಟ್ಟಿಗಾರ್, ಮಹಾಬಲ ಭಂಡಾರಿ, ರಾಮಚಂದ್ರ ಕುಳಾಯಿ, ಪ್ರದೀಪ್ ಶೆಟ್ಟಿ ಬಾಳಿಕೆ, ಅಶ್ವಿತ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿಗಳಾಗಿ ನಾಗರಾಜ್ ಕಡಂಬೋಡಿ, ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಶಿಶಿರ್ ಶೆಟ್ಟಿ, ಪ್ರವೀಣ್ ಶೆಟ್ಟಿ, ರತ್ನಾಕರ್ ಶೆಟ್ಟಿ ಮುದ್ದರ ಮನೆ, ದೇವೇಂದ್ರ ಎಫ್. ಶೆಟ್ಟಿ, ದಿವಾಕರ ಶೆಟ್ಟಿ ಚೇಳ್ಯಾರು, ಪುಂಡಲೀಕ ಹೊಸಬೆಟ್ಟು, ಕೋಶಾಧಿಕಾರಿಯಾಗಿ ಟಿ. ಎನ್ ರಮೇಶ್ ಆಯ್ಕೆಗೊಂಡರು.

ADVERTISEMENT

ಏಪ್ರಿಲ್ 29ರಂದು ಬಂಟರ ಭವನದ ಆವರಣದಲ್ಲಿ ಘಟಕದ ವಾರ್ಷಿಕೋತ್ಸವ ನಡೆಸಲು ತೀರ್ಮಾನಿಸಲಾಯಿತು. ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ವಾರ್ಷಿಕೋತ್ಸವದಂದು ಹಿರಿಯ ಕಲಾವಿದರಿಗೆ ಸನ್ಮಾನ ಮತ್ತು ಪಾವಂಜೆ ಮೇಳದ ಯಕ್ಷಗಾನ ನಡೆಸಲು ತೀರ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.