ಮೂಡುಬಿದಿರೆ (ದಕ್ಷಿಣ ಕನ್ನಡ): ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ನೀಡಿರುವ ದಕ್ಷಿಣ ಕನ್ನಡ ಜಿಲ್ಲೆ ಬಂದ್ ಹಿನ್ನೆಲೆಯಲ್ಲಿ ಮೂಡುಬಿದಿರೆಯ ಎಲ್ಲ ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿವೆ.
ಪೇಟೆಯಲ್ಲಿ ಹಿಂದುತ್ವವಾಗಿ ಸಂಘಟನೆಗಳ ಕಾರ್ಯಕರ್ತರು ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು. ಬಸ್ ಸಂಚಾರ ಸ್ಥಗಿತಗೊಂಡಿದೆ. ಕಾರು, ರಿಕ್ಷಾಗಳು ಓಡಾಟ ನಿಲ್ಲಿಸಿವೆ. ಕೆಲವು ಕಡೆ ಅಂಗಡಿಗಳನ್ನು ಬಲವಂತದಿಂದ ಬಂದ್ ಮಾಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.