ಬದಿಯಡ್ಕ: ಇಲ್ಲಿನ ಅಂಬೇಡ್ಕರ್ ವಿಚಾರ ವೇದಿಕೆಯ ವತಿಯಿಂದ ಸಾಹಿತಿ ಸುಂದರ ಬಾರಡ್ಕದ 50ನೇ ವರ್ಷಾಚರಣೆಯ ಅಂಗವಾಗಿ ಸುಂದರ ಸುವರ್ಣ ಸಂಭ್ರಮ ಡಿ.10ರಂದು ಬೆಳಿಗ್ಗೆ 10ರಿಂದ ಬದಿಯಡ್ಕದ ಸಂಸ್ಕೃತಿ ಭವನದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಭಾನುವಾರ ಹಿರಿಯ ಕಾಂತಗ ವಾದಕ ಚೋಮ ಕಾಟುಕುಕ್ಕೆ ಬಿಡುಗಡೆ ಮಾಡಿದರು. ಹಿರಿಯ ಪತ್ರಕರ್ತ ಮಲಾರ್ ಜಯರಾಮ ರೈ ಉದ್ಘಾಟಿಸುವರು. ರಾಮ ಪಟ್ಟಾಜೆ ಅಧ್ಯಕ್ಷತೆ ವಹಿಸುವರು. ರವೀಂದ್ರ ಆನೆಮಜಲ್, ಶ್ರೀರಾಮ ದಿವಾಣ ಭಾಗವಹಿಸುವರು. ನಂತರ ಸುಂದರ ಬಾರಡ್ಕ ಅವರ ಕೃತಿಗಳ ಬಗ್ಗೆ ವಿಚಾರಗೋಷ್ಠಿ ನಡೆಯಲಿದೆ. ಮಧ್ಯಾಹ್ನ 2.30ರಿಂದ ನಡೆಯುವ ಅಭಿನಂದನಾ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಅಭಿನಂದನಾ ಭಾಷಣ ಮಾಡುವರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.