ಮಂಗಳೂರು: ಉಡುಪಿಯ ಲೊಂಬಾರ್ಡ್ ಸ್ಮಾರಕ ಆಸ್ಪತ್ರೆಯ ನಿರ್ದೇಶಕ ಡಾ.ಸುಶಿಲ್ ಜತನ್ನ ಅವರು ಭಾರತೀಯ ಆರೋಗ್ಯಸೇವೆ ಪೂರೈಕೆದಾರರ ಸಂಘದ (ಎಎಚ್ಪಿಐ) ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಜನರಲ್ ಮೆಡಿಸಿನ್, ಪಬ್ಲಿಕ್ ಹೆಲ್ತ್ ಮೆಡಿಸಿನ್ ಮತ್ತು ಮ್ಯಾನೇಜ್ಮೆಂಟ್ ಎಂಬ ಮೂರು ಕ್ಷೇತ್ರಗಳಲ್ಲಿ ಸ್ನಾತಕೋತ್ತರ ಅರ್ಹತೆಗಳನ್ನು ಹೊಂದಿರುವ ವೈದ್ಯ ಎಂಬ ವಿಶೇಷ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಪ್ರಸ್ತುತ ಅವರು ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನ (ಸಿಎಂಸಿ) ಮಂಡಳಿ ಮತ್ತು ಕಾರ್ಯಕಾರಿ ಸಮಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ರೋಟರಿ ಕ್ಲಬ್ ಆಫ್ ಮಂಗಳೂರಿನ ಸದಸ್ಯರಾಗಿದ್ದಾರೆ. ಈ ಹಿಂದೆ ಅವರು ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉಪಾಧ್ಯಕ್ಷ, ಅದರ ಬ್ಲಡ್ ಬ್ಯಾಂಕ್ ಸಮಿತಿಯ ಅಧ್ಯಕ್ಷ ಆಗಿದ್ದರು. ಕರ್ನಾಟಕ ಅಂತರ ಡಯೋಸಿಸ್ ವೈದ್ಯಕೀಯ ಮಂಡಳಿಯ ಕಾರ್ಯದರ್ಶಿಯಾಗಿ , ಸಿಎಸ್ಐ ಸಿನೋಡ್ ನ ವೈದ್ಯಕೀಯ ಮಂಡಳಿಯ ಸಂಯೋಜಕರಾಗಿದ್ದರು.
ಎಎಚ್ಪಿಐ ರಾಷ್ಟ್ರೀಯ ಅಧ್ಯಕ್ಷ ಡಾ. ಅಲೆಕ್ಸ್ ಥಾಮಸ್, ಎಎಚ್ಪಿಐನ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಡಾ.ಸುಶೀಲ್ ಜಥನ್ನಾ ಅವರನ್ನು ಅಭಿನಂದಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.