ಮಂಗಳೂರು: ಪ್ರೊ.ಎಸ್.ವಿ. ಪರಮೇಶ್ವರ ಭಟ್ಟ ಸಂಸ್ಮರಣ ಪ್ರಶಸ್ತಿಗೆ ವಿಶ್ರಾಂತ ಕನ್ನಡ ಪ್ರಾಧ್ಯಾಪಕ, ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಡಾ.ತಾಳ್ತಜೆ ವಸಂತ ಕುಮಾರ್ (2022ರ ಸಾಲಿನ ಪ್ರಶಸ್ತಿ) ಹಾಗೂ ವಿಮರ್ಶಕ ಡಾ.ಒ.ಎಲ್. ನಾಗಭೂಷಣ ಸ್ವಾಮಿ (2023ರ ಸಾಲಿನ ಪ್ರಶಸ್ತಿ) ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ತಲಾ ₹10 ಸಾವಿರ ನಗದು ಬಹುಮಾನ ಒಳಗೊಂಡಿದೆ.
ಪ್ರೊ.ಬಿ.ಎ. ವಿವೇಕ ರೈ ಅಧ್ಯಕ್ಷತೆಯ ಸಮಿತಿ ಈ ಆಯ್ಕೆ ಮಾಡಿದೆ. ಪ್ರೊ.ಎಸ್.ವಿ.ಪಿ ಅವರ ಜನ್ಮದಿನವಾದ ಫೆಬ್ರುವರಿ 8ರಂದು ಮಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಎಸ್ವಿಪಿ ಸಂಸ್ಮರಣ ಸಮಿತಿಯ ಕಾರ್ಯದರ್ಶಿ ಡಾ.ನರಸಿಂಹ ಮೂರ್ತಿ ಆರ್. ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.