ಬೆಳ್ತಂಗಡಿ: ತಾಲ್ಲೂಕು ಪಂಚಾಯಿತಿಯ ಸಾಮಾನ್ಯ ಸಭೆ ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ್ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಶನಿವಾರ ನಡೆಯಿತು.
ಕಳೆದ ಸಾಮಾನ್ಯ ಸಭೆಯ ನಿರ್ಣಯಗಳ ಬಗ್ಗೆ ಕೈಗೊಂಡ ಕ್ರಮಗಳನ್ನು ಪರಿಶೀಲಿಸಲಾಯಿತು.
2024-25ನೇ ಸಾಲಿನ ತಾಲ್ಲೂಕು ಪಂಚಾಯತಿಯ ಮಾಸಿಕ ಲೆಕ್ಕ ಪತ್ರಗಳಿಗೆ ಹಾಗೂ ಇತರ ಇಲಾಖೆಗಳ ವಾರ್ಷಿಕ ಲೆಕ್ಕ ಪತ್ರಗಳಿಗೆ ಅನುಮೋದನೆ ನೀಡಲಾಯಿತು. 2025-26ನೇ ಸಾಲಿನ ಲಿಂಕ್ ದಾಖಲೆ ಪ್ರಕಾರ ವಿವಿಧ ಇಲಾಖೆಗಳಿಗೆ ವಾರ್ಷಿಕವಾಗಿ ನಿಗದಿಪಡಿಸಿದ ಕ್ರಿಯಾಯೋಜನೆಗಳಿಗೆ ಅನುಮೋದನೆ ನೀಡಲಾಯಿತು.
ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್., ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.