ADVERTISEMENT

ಕುಕ್ಕೆ ಅನ್ನದಾನಕ್ಕೆ ತೆಲಂಗಾಣ ಸಚಿವರಿಂದ ₹1 ಕೋಟಿ ಸಮರ್ಪಣೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2023, 23:30 IST
Last Updated 19 ಡಿಸೆಂಬರ್ 2023, 23:30 IST
ತೆಲಂಗಾಣದ ಕಂದಾಯ ಸಚಿವ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಅವರು ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ಅನ್ನದಾನಕ್ಕಾಗಿ ₹ 1 ಕೋಟಿ ನೀಡಿ ಹರಕೆ ಸೇವೆ ಪೂರೈಸಿದರು
ತೆಲಂಗಾಣದ ಕಂದಾಯ ಸಚಿವ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಅವರು ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ಅನ್ನದಾನಕ್ಕಾಗಿ ₹ 1 ಕೋಟಿ ನೀಡಿ ಹರಕೆ ಸೇವೆ ಪೂರೈಸಿದರು   

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ತೆಲಂಗಾಣದ ಕಂದಾಯ ಸಚಿವ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಅವರು ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ಅನ್ನದಾನಕ್ಕಾಗಿ ₹ 1 ಕೋಟಿ ನೀಡಿ ಹರಕೆ ಸೇವೆ ಪೂರೈಸಿದರು.

‘ಮಗಳ ಮದುವೆಗಾಗಿ ಮಾಡಿದ ಪ್ರಾರ್ಥನೆ ಫಲಿಸಿದ್ದರಿಂದ ಕುಟುಂಬದೊಂದಿಗೆ ಬಂದು ಅವರು ಸೇವೆ ಪೂರೈಸಿದರು’ ಎಂದು ದೇವಸ್ಥಾನದವರು ತಿಳಿಸಿದರು.

ಪ್ರಸಾದ್ ರೆಡ್ಡಿ, ಪ್ರೊ.ಗಣಪತಿ ಭಟ್, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪಿಜಿಎಸ್ಎನ್ ಪ್ರಸಾದ್, ಪ್ರಸನ್ನ ದರ್ಭೆ, ಶ್ರೀವತ್ಸಾ, ಲೋಕೇಶ್ ಮುಂಡೊಕಜೆ, ಶೋಭಾ ಗಿರಿಧರ್, ವನಜಾ ಭಟ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.