ADVERTISEMENT

ಬೆಂಗಳೂರು–ಮಂಗಳೂರು ರೈಲು ರದ್ದು

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 16:24 IST
Last Updated 2 ಅಕ್ಟೋಬರ್ 2020, 16:24 IST

ಮಂಗಳೂರು: ಪ್ರಯಾಣಿಕರ ಕೊರತೆಯಿಂದಾಗಿ ವಾರದಲ್ಲಿ ನಾಲ್ಕು ದಿನ ಸಂಚರಿಸುತ್ತಿದ್ದ ಕೆಎಸ್‌ಆರ್‌ ಬೆಂಗಳೂರು–ಮಂಗಳೂರು ಸೆಂಟ್ರಲ್‌– ಕೆಎಸ್‌ಆರ್‌ ಬೆಂಗಳೂರು (ರೈ.ಸಂ. 06515/06516) ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಕುಣಿಗಲ್‌, ಶ್ರವಣಬೆಳಗೂಳ ಮಾರ್ಗವಾಗಿ ಇತ್ತೀಚೆಗಷ್ಟೇ ಆರಂಭವಾಗಿದ್ದ ಈ ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆ ಅತ್ಯಂತ ಕಡಿಮೆಯಾಗಿತ್ತು. ಇದೀಗ ಈ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಹೊರಡುವ ರೈಲು ಸಂಚಾರವನ್ನು ಇದೇ 7 ರಿಂದ ಹಾಗೂ ಮಂಗಳೂರು ಸೆಂಟ್ರಲ್‌ನಿಂದ ಬೆಂಗಳೂರಿಗೆ ಹೊರಡುವ ರೈಲು ಸಂಚಾರ ಇದೇ 11 ರಿಂದ ರದ್ದುಗೊಳಿಸಲಾಗಿದೆ.

ADVERTISEMENT

ಮೈಸೂರು ಮಾರ್ಗವಾಗಿ ವಾರದಲ್ಲಿ ಮೂರು ದಿನ ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ರೈಲಿನ ವೇಳಾಪಟ್ಟಿಯನ್ನೂ ಪರಿಷ್ಕರಿಸಲಾಗಿದೆ.

ಕೆಎಸ್‌ಆರ್‌ ಬೆಂಗಳೂರು– ಮಂಗಳೂರು ಸೆಂಟ್ರಲ್‌ (ರೈ.ಸಂ. 06517) ರೈಲು ಇದೇ 7 ರಿಂದ ಪ್ರತಿ ಬುಧವಾರ, ಶುಕ್ರವಾರ ಹಾಗೂ ಭಾನುವಾರ ಸಂಚರಿಸಲಿದೆ. ಈ ಮೊದಲು ಈ ರೈಲು ಭಾನುವಾರ, ಸೋಮವಾರ, ಮಂಗಳವಾರ ಸಂಚರಿಸುತ್ತಿತ್ತು.

ಮಂಗಳೂರು ಸೆಂಟ್ರಲ್– ಕೆಎಸ್‌ಆರ್‌ ಬೆಂಗಳೂರು (ರೈ.ಸಂ 06518) ರೈಲು ಇದೇ 8 ರಿಂದ ಗುರುವಾರ, ಶನಿವಾರ ಹಾಗೂ ಸೋಮವಾರ ಸಂಚರಿಸಲಿದೆ. ಈ ಮೊದಲು ಗುರುವಾರ, ಶುಕ್ರವಾರ ಹಾಗೂ ಶನಿವಾರ ರೈಲು ಸಂಚಾರ ಮಾಡುತ್ತಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.