ADVERTISEMENT

ಮೂಲ್ಕಿ ಸೇತುವೆ ಮೇಲೆ ಅಪಘಾತ: ತೀರ್ಥಹಳ್ಳಿಯ ದಂಪತಿ ಸಾವು

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2023, 10:17 IST
Last Updated 7 ಮಾರ್ಚ್ 2023, 10:17 IST
   

ಮೂಲ್ಕಿ (ದಕ್ಷಿಣ ಕನ್ನಡ): ಇಲ್ಲಿಯ ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಮೂಲ್ಕಿ ಸೇತುವೆ ಮೇಲೆ ಮಂಗಳವಾರ ಅಪಘಾತ ಸಂಭವಿಸಿದ್ದು, ದಂಪತಿ ಮೃತಪಟ್ಟಿದ್ದಾರೆ.

ಮೃತರನ್ನು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಕೋಳಿ ಕಾಲುಗುಡ್ಡೆ ನಿವಾಸಿಗಳಾದ ಅಕ್ಬರ್ ಬಾಷಾ (60), ಅವರ ಪತ್ನಿ ಖತೀಜಾಬಿ (46) ಎಂದು ಗುರುತಿಸಲಾಗಿದೆ. ಇವರು ಪಾಸ್‌ಪೋರ್ಟ್‌ ಮಾಡಿಸಲು ಮಂಗಳೂರಿನ ಪಾಸ್‌ಪೋರ್ಟ್‌ ಕಚೇರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇವರು ಪ್ರಯಾಣಿಸುತ್ತಿದ್ದ ಸ್ಕೂಟರ್‌ ಆಯತಪ್ಪಿದ್ದರಿಂದ ರಸ್ತೆಯಲ್ಲಿ ಉರುಳಿ ಬಿದ್ದಿದ್ದೆ. ಅದೇ ರಸ್ತೆಯಲ್ಲಿ ಬರುತ್ತಿದ್ದ ಟ್ಯಾಂಕರ್‌ ಇವರಿಬ್ಬರ ತಲೆ ಮೇಲೆ ಹರಿದಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ಬೈಕಂಪಾಡಿಯ ಉತ್ತರ ವಲಯದ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.