ADVERTISEMENT

ಪ್ರವೀಣ್ ಹತ್ಯೆ- ಮೂರನೇ ಆರೋಪಿ ವಶಕ್ಕೆ?

​ಪ್ರಜಾವಾಣಿ ವಾರ್ತೆ
Published 29 ಜುಲೈ 2022, 6:44 IST
Last Updated 29 ಜುಲೈ 2022, 6:44 IST
   

ಸುಳ್ಯ: ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಚಿಕನ್ ಸೆಂಟರ್ ಹೊಂದಿದ್ದ ಸದ್ದಾಂ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ ಎಂಬ ಬಗ್ಗೆ ಮಾಹಿತಿಯಿದೆ.

ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಬೆಳ್ಳಾರೆಯ ಶಫೀಕ್‌ (27) ಮತ್ತು ಸವಣೂರಿನ ಝಾಕೀರ್‌ (29) ಬಂಧಿತರು. ಈ ಆರೋಪಿಗಳಿಗೆ ನ್ಯಾಯಾಂಗ ಕಸ್ಟಡಿ ವಿಧಿಸಲಾಗಿದೆ.

ADVERTISEMENT

ಪ್ರವೀಣ್‌ ಅವರ ನೈಜ ಹಂತಕರು ಕೇರಳಕ್ಕೆ ಪರಾರಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಶೋಧ ಮುಂದುವರಿದಿದೆ. ಹತ್ಯೆಗೆ ಸಂಬಂಧಿಸಿ 27 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಹಂತಕರು ಕೇರಳದವರು ಎಂಬ ಅನುಮಾನ ಇದ್ದು, ಅವರಿಗೆ ಮಾಹಿತಿದಾರ ರಾಗಿ ಸ್ಥಳೀಯರು ಸಹಕರಿಸಿದ್ದರೇ ಅಥವಾ ಕೃತ್ಯದಲ್ಲಿ ಸ್ಥಳೀಯರು ನೇರವಾಗಿ ಭಾಗಿಯಾಗಿದ್ದಾರೆಯೇ ಎಂಬುದು ತನಿಖೆಯಿಂದ ತಿಳಿಯಬೇಕಿದೆ.ಚಿಕನ್ ಸೆಂಟರ್ ಹೊಂದಿದ್ದ ಸದ್ದಾಂ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ ಎಂಬ ಬಗ್ಗೆ ಮಾಹಿತಿಯಿದೆ.
ಆದರೆ ಇದನ್ನು ಪೋಲಿಸರು ಇನ್ನೂ ಖಚಿತಪಡಿಸಿಲ್ಲ.

ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಇಬ್ಬರನ್ನು ಬಂಧಿಸಿದ್ದರು. ಬೆಳ್ಳಾರೆಯ ಶಫೀಕ್‌ (27) ಮತ್ತು ಸವಣೂರಿನ ಝಾಕೀರ್‌ (29) ಬಂಧಿತರು. ಈ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರವೀಣ್‌ ಅವರ ನೈಜ ಹಂತಕರು ಕೇರಳಕ್ಕೆ ಪರಾರಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಶೋಧ ಮುಂದುವರಿದಿದೆ. ಹತ್ಯೆಗೆ ಸಂಬಂಧಿಸಿ 27 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಹಂತಕರು ಕೇರಳದವರು ಎಂಬ ಅನುಮಾನ ಇದ್ದು, ಅವರಿಗೆ ಮಾಹಿತಿದಾರ ರಾಗಿ ಸ್ಥಳೀಯರು ಸಹಕರಿಸಿದ್ದರೇ ಅಥವಾ ಕೃತ್ಯದಲ್ಲಿ ಸ್ಥಳೀಯರು ನೇರವಾಗಿ ಭಾಗಿಯಾಗಿದ್ದಾರೆಯೇ ಎಂಬುದು ತನಿಖೆಯಿಂದ ತಿಳಿಯಬೇಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇವುಗಳನ್ನೂ ಓದಿ..

ಇವುಗಳನ್ನೂ ಓದಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.