ಮಂಗಳೂರು: ಸುರತ್ಕಲ್ ಟೋಲ್ಗೇಟ್ನಲ್ಲಿ ಟೋಲ್ ಶುಲ್ಕ ಕೇಳಿದ ಸಿಬ್ಬಂದಿಯ ಮೇಲೆ 8 ಜನರ ತಂಡವೊಂದು ಭಾನುವಾರ ರಾತ್ರಿ ಹಲ್ಲೆ ನಡೆಸಿದೆ.
ಕೆಎ 47 ಹಾಗೂ ಕೆಎ 19ನೋಂದಣಿ ಹೊಂದಿರುವ ಭಟ್ಕಳದಎರಡು ಕಾರುಗಳಲ್ಲಿದ್ದ 8 ಜನರು ಟೋಲ್ಗೇಟ್ನ ಬೂತ್ಗೆ ನುಗ್ಗಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಪೀಠೋಕರಣ ಮತ್ತು ಯಂತ್ರೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಟೋಲ್ಗೇಟ್ ಸಿಬ್ಬಂದಿಗೆ ಮೂಳೆ ಮುರಿದಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಟೋಲ್ಗೇಟ್ನ ಸಿಬ್ಬಂದಿ 112 ತುರ್ತು ಸಹಾಯವಾಣಿಗೆ ಕರೆ ಮಾಡಿದ್ದು, ಪೊಲೀಸರು ಬರುವಷ್ಟರಲ್ಲಿ ಆರೋಪಿಗಳು ಕಾರಿನೊಂದಿಗೆ ಪರಾರಿಯಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.