ಬೀರೂರು: ಬೀರೂರಿನಿಂದ ಹೆಳವರ ಹಟ್ಟಿ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಟ್ರಾಕ್ಟರ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಆಕಾಶ್ (28) ಮೃತಪಟ್ಟಿದ್ದಾರೆ.
ಆಕಾಶ್ ಅವರು ಬೀರೂರಿನ ಈಕ್ವಿಟಾಸ್ ಬ್ಯಾಂಕ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಭಾನುವಾರ ಸಂಜೆ ಹೆಳವರ ಹಟ್ಟಿ ಕಡೆಗೆ ತೆರಳುತ್ತಿದ್ದಾಗ ಅವಘಡ ನಡೆದಿದೆ. ತಲೆ ಮತ್ತು ಕೈಗೆ ಬಲವಾದ ಪೆಟ್ಟು ಬಿದ್ದಿದ್ದ ಅವರನ್ನು ಬೀರೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟರು. ಅಪಘಾತ ಎಸಗಿದ ಟ್ರಾಕ್ಟರ್ ಮತ್ತು ಚಾಲಕನ ಗುರುತು ಪತ್ತೆಯಾಗಿಲ್ಲ.
ಆಕಾಶ್ ಅವರ ಸಹೋದರಿ ನೀಡಿದ ದೂರಿನ ಅನ್ವಯ ಬೀರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.