ADVERTISEMENT

ಸೇತುವೆ ದುರಸ್ತಿ: ಸಂಚಾರ ಕಿರಿಕಿರಿ

ಬೈಕಂಪಾಡಿ, ಕೊಟ್ಟಾರಚೌಕಿ ಭಾಗದಲ್ಲಿ ಕಿ.ಮೀ. ಉದ್ದದವರೆಗೆ ವಾಹನಗಳ ಸಾಲು

​ಪ್ರಜಾವಾಣಿ ವಾರ್ತೆ
Published 24 ಜುಲೈ 2025, 5:39 IST
Last Updated 24 ಜುಲೈ 2025, 5:39 IST
ಮಂಗಳೂರಿನ ಕೂಳೂರು ಹಳೆ ಸೇತುವೆ ದುರಸ್ತಿ ಕಾಮಗಾರಿ ಪ್ರಯುಕ್ತ ಒಂದು ಕಡೆ ರಸ್ತೆ ಬಂದ್ ಮಾಡಿರುವುದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ದಟ್ಟಣೆ ವಿಪರೀತವಾಗಿತ್ತು  ಪ್ರಜಾವಾಣಿ ಚಿತ್ರ 
ಮಂಗಳೂರಿನ ಕೂಳೂರು ಹಳೆ ಸೇತುವೆ ದುರಸ್ತಿ ಕಾಮಗಾರಿ ಪ್ರಯುಕ್ತ ಒಂದು ಕಡೆ ರಸ್ತೆ ಬಂದ್ ಮಾಡಿರುವುದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ದಟ್ಟಣೆ ವಿಪರೀತವಾಗಿತ್ತು  ಪ್ರಜಾವಾಣಿ ಚಿತ್ರ    

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಗರದ ಹೊರವಲಯದ ಕೂಳೂರು ಹಳೆ ಸೇತುವೆಯ ಬಳಿ ದುರಸ್ತಿಯ ಕಾರಣಕ್ಕೆ ಮಂಗಳವಾರ ರಾತ್ರಿ 8 ಗಂಟೆಯಿಂದ ರಸ್ತೆ ಸಂಚಾರ ಬಂದ್ ಮಾಡಲಾಗಿದ್ದು, ಬುಧವಾರ ಇಡೀ ದಿನ ಈ ಭಾಗದಲ್ಲಿ ಸಂಚರಿಸುವವರು ಕಿರಿಕಿರಿ ಅನುಭವಿಸಿದರು.

ಹೊಸ ಸೇತುವೆಯ ರಸ್ತೆಯಲ್ಲಿ ದ್ವಿಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದೇ ರಸ್ತೆಯಲ್ಲಿ ಮಂಗಳೂರು ಕಡೆಯಿಂದ ಉಡುಪಿ ಕಡೆ ಹೋಗುವ ವಾಹನಗಳು, ಉಡುಪಿ ಕಡೆಯಿಂದ ಮಂಗಳೂರು ನಗರಕ್ಕೆ ಬರುವ ವಾಹನಗಳು ಸಂಚರಿಸಬೇಕಾಗಿದೆ. ಇದರಿಂದಾಗಿ, ಬೈಕಂಪಾಡಿ, ಕೊಟ್ಟಾರಚೌಕಿ, ಕೆಪಿಟಿ, ನಂತೂರು ಭಾಗದಲ್ಲಿ ವಿಪರೀತ ಸಂಚಾರ ದಟ್ಟಣೆ ಉಂಟಾಯಿತು.

ಶಾಲೆ –ಕಾಲೇಜು, ಉದ್ಯೋಗಿಗಳು ಉದ್ಯೋಗಕ್ಕೆ ತೆರಳುವ ಹಾಗೂ ವಾಪಸ್ ಬರುವ ಬೆಳಗಿನ ಹೊತ್ತು ಹಾಗೂ ಸಂಜೆಯ ವೇಳೆ 500 ಮೀಟರ್ ದೂರ ಕ್ರಮಿಸಲು ವಾಹನ ಸವಾರರು 45 ನಿಮಿಷಕ್ಕೂ ಹೆಚ್ಚು ಕಾಲ ಬೇಕಾಯಿತು. ಕಿ.ಮೀ. ಉದ್ದದವರೆಗೆ ವಾಹನಗಳು ಸಾಲಾಗಿ ನಿಂತಿದ್ದವು. ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

ADVERTISEMENT

ಹಳೆ ಸೇತುವೆಯ ಬಳಿಯ ಕೆಐಒಸಿಎಲ್ ಜಂಕ್ಷನ್‌ನಿಂದ ಅಯ್ಯಪ್ಪ ಗುಡಿಯವರೆಗೆ ಮಂಗಳವಾರ ರಾತ್ರಿ 8 ಗಂಟೆಯಿಂದ ಜು.25ರ ಬೆಳಿಗ್ಗೆ 8 ಗಂಟೆವರೆಗೆ ರಸ್ತೆ ದುರಸ್ತಿ ಕಾಮಗಾರಿ ನಡೆಯಲಿದೆ. ಹೀಗಾಗಿ, ಬದಲಿ ಮಾರ್ಗಕ್ಕೆ ಸಲಹೆ ನೀಡಿ ನಗರ ಪೊಲೀಸ್ ಕಮಿಷನರ್ ಪ್ರಕಟಣೆ ಹೊರಡಿಸಿದ್ದರು. ಉಡುಪಿ ಕಡೆಯಿಂದ ಬರುವ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಿದ ಕಾರಣ, ಅಲ್ಲಿಯೂ ವಾಹನ ದಟ್ಟಣೆ ಉಂಟಾಯಿತು. 

ಮಂಗಳೂರಿನ ಕೂಳೂರು ಹಳೆ ಸೇತುವೆ ದುರಸ್ತಿ ಕಾಮಗಾರಿ ಪ್ರಯುಕ್ತ ಒಂದು ಕಡೆ ರಸ್ತೆ ಬಂದ್ ಮಾಡಿರುವುದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ದಟ್ಟಣೆ ವಿಪರೀತವಾಗಿತ್ತು   ಪ್ರಜಾವಾಣಿ ಚಿತ್ರ 
ಮಂಗಳೂರಿನ ಕೂಳೂರು ಸೇತುವೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದು ಪ್ರಜಾವಾಣಿ ಚಿತ್ರ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.