ADVERTISEMENT

ಮಂಗಳೂರು ಸಿಸಿಬಿ ಇನ್‌ಸ್ಪೆಕ್ಟರ್ ವರ್ಗಾವಣೆ: ರಾಜಕೀಯ ಹಸ್ತಕ್ಷೇಪದ ಅನುಮಾನ

ಡ್ರಗ್ಸ್‌ ತನಿಖೆ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 18:40 IST
Last Updated 2 ಅಕ್ಟೋಬರ್ 2020, 18:40 IST
   

ಮಂಗಳೂರು: ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದ ಸಿಸಿಬಿ ಇನ್‌ಸ್ಪೆಕ್ಟರ್‌ ಶಿವಪ್ರಕಾಶ್‌ ನಾಯ್ಕ್‌ ಅವರನ್ನು ದಿಢೀರ್‌ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಕಾಪು ಸರ್ಕಲ್‌ ಇನ್‌ಸ್ಪೆಕ್ಟರ್‌ ಮಹೇಶ್‌ಪ್ರಸಾದ್‌ ಅವರನ್ನು ನೇಮಿಸಲಾಗಿದೆ.

ಸಿಸಿಬಿ ಇನ್‌ಸ್ಪೆಕ್ಟರ್‌ ಆಗಿದ್ದ ಶಿವಪ್ರಕಾಶ್‌ ನಾಯ್ಕ್‌ ಅವರು ಬಂಧಿತ ಆರೋಪಿಗಳ ವಿಚಾರಣೆ ನಡೆಸಿದ್ದು, ಹಲವು ಸಂಗತಿಗಳು ಬಯಲಿಗೆ ಬಂದಿದ್ದವು. ಆರೋಪಿಗಳು ನೀಡಿದ ಮಾಹಿತಿಯಂತೆ ನಟಿ, ನಿರೂಪಕಿ ಅನುಶ್ರೀ ವಿಚಾರಣೆ ನಡೆಸಲಾಗಿದ್ದು, ಶಿವಪ್ರಕಾಶ್‌ ನಾಯ್ಕ್‌ ಅವರು ಇದರ ನೇತೃತ್ವ ವಹಿಸಿದ್ದರು.

ಪ್ರಮುಖ ಮಾಹಿತಿಗಳು ಬಯಲಿಗೆ ಬರುತ್ತಿದ್ದಂತೆಯೇ ಶಿವಪ್ರಕಾಶ್‌ ನಾಯ್ಕ್‌ ಅವರ ವರ್ಗಾವಣೆ ಆಗಿರುವುದು ಚರ್ಚೆಗೆ ಗ್ರಾಸವಾಗಿದೆ. ಆದರೆ, ಪೊಲೀಸ್ ಇಲಾಖೆ ಮಾತ್ರ ಇದು ಆಡಳಿತಾತ್ಮಕ ಬದಲಾವಣೆ ಎಂದು ಸ್ಪಷ್ಟಪಡಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.