ಮಂಗಳೂರು: ಹಾಲು ಸಾಗಿಸುವ ವಾಹನದಲ್ಲಿ ಗೋ ಮಾಂಸ ಸಾಗಣೆ ಮಾಡುತ್ತಿದ್ದವರನ್ನು ಬಜರಂಗದಳದ ಕಾರ್ಯಕರ್ತರು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಮಂಗಳವಾರ ಬೆಳಿಗ್ಗೆ ನಗರದ ವೆನ್ಲಾಕ್ ಆಸ್ಪತ್ರೆ ಬಳಿ ವಾಹನ ತಪಾಸಣೆ ಮಾಡಿದಾಗ ಇದು ಪತ್ತೆಯಾಗಿದೆ.
ಆರೋಪಿಗಳು ಹಾಸನದಿಂದ ಕುದ್ರೋಳಿಗೆ ಹಾಲಿನ ವಾಹನದಲ್ಲಿ ಗೋಮಾಂಸ ಸಾಗಣೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಂದರು ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.