ಮಂಗಳೂರು: ರೌಡಿಶೀಟರ್, ಚಿತ್ರನಟ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಸತೀಶ ಕುಲಾಲ್ ಹಾಗೂ ಕಿನ್ನಿಗೋಳಿಯ ಗಿರೀಶ್ ಬಂಧಿತ ಆರೋಪಿಗಳು. ಇಬ್ಬರೂ ಕೇರಳದಿಂದ ಬಂಟ್ವಾಳಕ್ಕೆ ಬರುತ್ತಿರುವ ಮಾಹಿತಿ ಪಡೆದ ಪೊಲೀಸರು, ಇಬ್ಬರನ್ನು ಮುಡಿಪು ಬಳಿ ಬಂಧಿಸಿದ್ದಾರೆ.
ಮೂರು ದಿನಗಳ ಹಿಂದೆ ಬಂಟ್ವಾಳದ ಅಪಾರ್ಟಮೆಂಟ್ನಲ್ಲಿ ಸುರೇಂದ್ರ ಬಂಟ್ವಾಳ ಕೊಲೆಯಾಗಿತ್ತು. ನಂತರ ಸುರೇಂದ್ರ ಬಂಟ್ವಾಳನ ಆಪ್ತ ಎನ್ನಲಾದ ಸತೀಶ್ ಎಂಬಾತ ಅಡಿಯೊ ಕಳುಹಿಸಿದ್ದು, ಸುರೇಂದ್ರ ಬಂಟ್ವಾಳ ಕೊಲೆ ಮಾಡಿರುವುದು ನಾನೇ. ಇದು ಉಡುಪಿಯ ಕಿಶನ್ ಹೆಗ್ಡೆ ಕೊಲೆಗೆ ಪ್ರತೀಕಾರ ಎಂದು ತಿಳಿಸಿದ್ದ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.