ಮಂಗಳೂರು: ನಗರದ ಸುರತ್ಕಲ್ನಲ್ಲಿ ಮತೀಯ ಗೂಂಡಾಗಿರಿ ನಡೆಸಿದ ಆರು ಜನ ಆರೋಪಿಗಳನ್ನು ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ. ಪ್ರಹ್ಲಾದ್, ಪ್ರಶಾಂತ್, ಗುರುಪ್ರಸಾದ್, ಪ್ರತೀಶ್, ಭರತ್, ಸುಖೇಶ್ ಬಂಧಿತ ಆರೋಪಿಗಳು.
ಭಿನ್ನ ಕೋಮಿನ ಯುವತಿಯೊಂದಿಗೆ ಬೈಕ್ನಲ್ಲಿ ಹೋಗುತ್ತಿದ್ದಯುವಕನೊಬ್ಬನನ್ನು ಬೆನ್ನಟ್ಟಿದ ಅರೋಪಿಗಳು ಹಲ್ಲೆನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಯುವತಿ ಅಪಾರ್ಟ್ಮೆಂಟ್ ಖಾಲಿ ಮಾಡುತ್ತಿದ್ದುದರಿಂದ ಲಗೇಜ್ ಶಿಫ್ಟ್ ಮಾಡಿ ಯುವಕ, ಯುವತಿಯನ್ನು ಕರೆದುಕೊಂಡು ಹೋಗುತ್ತಿದ್ದ. ಈ ವೇಳೆ ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದಯುವಕರ ತಂಡ ಯುವಕನಿಗೆ ಥಳಿಸಿದೆ. ಈ ಬಗ್ಗೆ ಯುವಕ ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಭೇಟಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.