ಉಡುಪಿ: ‘ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಉಡುಪಿ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಆ ಮೂಲಕ ಉಡುಪಿ ಜಿಲ್ಲೆ ಮತ್ತೊಮ್ಮೆ ಬುದ್ಧಿವಂತರ ಜಿಲ್ಲೆಯೆಂದು ಸಾಬೀತಾಗಿದೆ. ಕರಾವಳಿಯ ಜನರಿಗೆ ಬುದ್ಧಿ ಕಡಿಮೆ ಎಂಬ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗೆ ಕರಾವಳಿಗರು ಪಿಯುಸಿ ಫಲಿತಾಂಶದ ಮೂಲಕ ಉತ್ತರ ಕೊಟ್ಟಿದ್ದಾರೆ’ ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು.
ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ವಿಷಯ ಪ್ರಸ್ತಾಪಿಸಿದರು. ಚುನಾವಣೆಯಲ್ಲಿ ಮತ ಹಾಕುವ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ, ‘ಉಡುಪಿ, ಕರಾವಳಿಯ ಜನರು ಬುದ್ಧಿ ಊನ್ಯ ಕೆಲಸ ಮಾಡುತ್ತಿದ್ದಾರೆ’ ಎಂಬರ್ಥದ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದನ್ನಿಲ್ಲಿ ಸ್ಮರಿಸಬಹುದಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.