ಉಜಿರೆ: ಭಾನುವಾರ ರಾತ್ರಿ ಚಾರ್ಮಾಡಿ ಘಾಟಿಯ ಎರಡನೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೂರು ಮೀಟರ್ ಆಳದ ಕಂದಕಕ್ಕೆ ಕಾರು ಉರುಳಿ ಬಿದ್ದು ಸರೋಜಿನಿ ಶೆಟ್ಟಿ (64) ಸೋಮ ವಾರ ಮೃತಪಟ್ಟಿದ್ದಾರೆ. ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬದವರು ಕೊಪ್ಪದಲ್ಲಿ ನಿಧನ ರಾದ ಸಂಬಂಧಿಕರ ಮನೆಗೆ ಭೇಟಿ ನೀಡಿ ಉಜಿರೆಗೆ ಬರುವಾಗ ಕಾರು ಬಿದ್ದಿದೆ.
ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
ಕಾರಿನಲ್ಲಿದ್ದ ಪುಷ್ಪಾವತಿ ಆರ್.ಶೆಟ್ಟಿ, ಅವರ ಮಗಳು ಪೂರ್ಣಿಮಾ ಶೆಟ್ಟಿ, ಮೊಮ್ಮಕ್ಕಳಾದ ಸಮೃದ್ಧ್, ಸಾಕ್ಷಿ, ಸಂಬಂಧಿ ಸರೋಜಿನಿ ಶೆಟ್ಟಿ, ಕಾರು ಚಾಲಕ ಅರುಣ್ ಅವರಿಗೆ ಗಂಭೀರ ಪೆಟ್ಟಾಗಿದ್ದು ಕಕ್ಕಿಂಜೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಶುಶ್ರೂಷೆ ನೀಡಿ ರಾತ್ರಿಯೇ ಆಂಬುಲೆನ್ಸ್ನಲ್ಲಿ ಮಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಚೇತರಿಸುತ್ತಿರುವುದಾಗಿ ತಿಳಿದು ಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.