ADVERTISEMENT

ಮಂಗಳೂರು: ಮಂಜುಗಡ್ಡೆ ಘಟಕಗಳಿಗೆ ಕೇಂದ್ರ ಸಚಿವ‌ ಮುರುಗನ್ ಭೇಟಿ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2021, 7:25 IST
Last Updated 17 ಅಕ್ಟೋಬರ್ 2021, 7:25 IST
   

ಮಂಗಳೂರು: ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ, ವಾರ್ತಾ ಮತ್ತು ಪ್ರಸಾರ ಇಲಾಖೆಯ ರಾಜ್ಯ ಸಚಿವ ಎಲ್. ಮುರುಗನ್ ಭಾನುವಾರ ನಗರದ ಬೈಕಂಪಾಡಿಯ ಮಂಜುಗಡ್ಡೆ ಘಟಕಗಳಿ‌ಗೆ ಭೇಟಿ ನೀಡಿದರು. ನಂತರ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳಿಗೆ ಶೀತಲೀಕರಣ ವಾಹನಗಳ ವಿತರಣೆ ಮಾಡಿದರು.

ಇದೇ‌ ಸಂದರ್ಭದಲ್ಲಿ ಮೀನುಗಾರಿಕೆಯನ್ನು ವೀಕ್ಷಿಸಿದ ಅವರು, ಮೀನುಗಾರರ ಜೊತೆಗೆ ಸಂವಾದ ನಡೆಸಿದರು.

ಮೀನುಗಾರಿಕೆ, ಬಂದರು‌ ಹಾಗೂ ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ, ಸ್ಥಳೀಯ ಶಾಸಕ ಡಾ. ಭರತ್ ಶೆಟ್ಟಿ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಮೀನುಗಾರಿಕೆ ಇಲಾಖೆ ನಿರ್ದೇಶಕರು, ಅಧಿಕಾರಿಗಳು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.