ADVERTISEMENT

ಉಪ್ಪಿನಂಗಡಿ: ಲಕ್ಷದೀಪೋತ್ಸವ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2025, 6:05 IST
Last Updated 22 ನವೆಂಬರ್ 2025, 6:05 IST
ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ ನಿಮಿತ್ತ ದೇವರ ಉತ್ಸವ ನಡೆಯಿತು
ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ ನಿಮಿತ್ತ ದೇವರ ಉತ್ಸವ ನಡೆಯಿತು   

ಉಪ್ಪಿನಂಗಡಿ: ಇಲ್ಲಿನ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದಲ್ಲಿ ಲಕ್ಷದೀಪೋತ್ಸವ ನೆರವೇರಿತು.

ಕ್ಷೇತ್ರದ ತಂತ್ರಿ ಕೆಮ್ಮಿಂಜೆ ನಾಗೇಶ್ ಉಪಸ್ಥಿತಿಯಲ್ಲಿ ಅನಂತ ಬಳ್ಳಕ್ಕುರಾಯ ಬಲಿ ಉತ್ಸವದ ವಿಧಿ ವಿಧಾನಗಳನ್ನು ನೆರವೇರಿಸಿದರು. ಲಕ್ಷ ದೀಪೋತ್ಸವ ಹಾಗೂ ವಸಂತ ಕಟ್ಟೆ ಪೂಜೆ, ಮಹಾಪೂಜೆ ‌ನಡೆಯಿತು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಯ್ಕ್‌, ಸದಸ್ಯರಾದ ಜಿ.ಕೃಷ್ಣರಾವ್ ಅರ್ತಿಲ, ವೆಂಕಪ್ಪ ಪೂಜಾರಿ, ಡಾ.ರಮ್ಯಾ ರಾಜಾರಾಂ, ಕಾರ್ಯನಿರ್ವಹಣಾಧಿಕಾರಿ ಕವಿತಾ ಪಿ., ಪ್ರಮುಖರಾದ ಕರುಣಾಕರ ಸುವರ್ಣ, ಹರಿರಾಮಚಂದ್ರ, ಕಂಗ್ವೆ ವಿಶ್ವನಾಥ ಶೆಟ್ಟಿ, ಜ್ಯೋತಿ ಹೇರಂಭ ಶಾಸ್ತ್ರಿ, ಯು. ರಾಮ, ಪ್ರಶಾಂತ್ ನೆಕ್ಕಿಲಾಡಿ ಭಾಗವಹಿಸಿದ್ದರು.

ADVERTISEMENT

ದೇವಳದ ವತಿಯಿಂದ ಅನ್ನಪ್ರಸಾದ ನಡೆಯಿತು. ದೇವಳದ ವ್ಯವಸ್ಥಾಪಕ ವೆಂಕಟೇಶ್ ರಾವ್, ಪದ್ಮನಾಭ ಕುಲಾಲ್, ಕೃಷ್ಣ ಪ್ರಸಾದ್ ಬಡಿಲ, ದಿವಾಕರ, ಸುಧಾಕರ ಶೆಟ್ಟಿ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.