ADVERTISEMENT

ಉಪ್ಪಿನಂಗಡಿ: ರಥೋತ್ಸವ, ದರ್ಶನ ಬಲಿ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2026, 2:59 IST
Last Updated 17 ಫೆಬ್ರುವರಿ 2026, 2:59 IST
ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಖೆ ಕೂಟದ ಅಂಗವಾಗಿ ದರ್ಶನ ಬಲಿ ನಡೆಯಿತು
ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಖೆ ಕೂಟದ ಅಂಗವಾಗಿ ದರ್ಶನ ಬಲಿ ನಡೆಯಿತು   

ಉಪ್ಪಿನಂಗಡಿ: ಇಲ್ಲಿನ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದಲ್ಲಿ ಮಹಾಶಿವರಾತ್ರಿ 1ನೇ ಮಖೆ ಕೂಟ ಸಂಭ್ರಮದಿಂದ ಭಾನುವಾರ ರಾತ್ರಿ ನಡೆಯಿತು.

ಕೆಮ್ಮಿಂಜೆ ನಾಗೇಶ್ ತಂತ್ರಿ ನೇತೃತ್ವದಲ್ಲಿ, ಪವಿತ್ರಪಾಣಿ ಕರಾಯ ವಿಷ್ಣುಮೂರ್ತಿ ಕುದ್ದಣ್ಣಾಯ ಅವರ ಉಪಸ್ಥಿತಿಯಲ್ಲಿ ದೇವಳದಲ್ಲಿ ರುದ್ರಪಾರಾಯಣ, ಬಲಿ ಉತ್ಸವ, ಮಹಾಪೂಜೆ ನಡೆಯಿತು. ಸೋಮವಾರ ನಸುಕಿನಿಂದಲೇ ನದಿ ಸಂಗಮ ಸ್ಥಳದಲ್ಲಿ ಮಖೆ ತೀರ್ಥ ಸ್ನಾನ ನಡೆಯಿತು. ದೇವರ ಬಲಿ, ರಥ ಬೀದಿಯಲ್ಲಿ ರಥೋತ್ಸವವು ನಡೆಯಿತು. ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆಯಾಗಿ ಪಿಡಬ್ಲ್ಯುಡಿ ಗುತ್ತಿಗೆದಾರ ಕೆ.ರಾಧಾಕೃಷ್ಣ ನಾಯಕ್ ಅವರ ಸೇವಾರ್ಥ ಅನ್ನಸಂತರ್ಪಣೆ ನಡೆಯಿತು.

ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಯಕ್, ಸಮಿತಿ ಸದಸ್ಯರಾದ ಹರೀಶ್ ಉಪಾಧ್ಯಾಯ, ಸೋಮನಾಥ, ಡಾ.ರಮ್ಯಾ ರಾಜಾರಾಮ್, ಅನಿತಾ ಕೇಶವ ಗೌಡ, ಗೋಪಾಲಕೃಷ್ಣ ರೈ, ಜಿ.ಕೃಷ್ಣ ರಾವ್ ಅರ್ತಿಲ, ದೇವಿದಾಸ್ ರೈ, ಎಂ.ವೆಂಕಪ್ಪ ಪೂಜಾರಿ, ದೇವಳದ ಕಾರ್ಯನಿರ್ವಹಣಾಧಿಕಾರಿ ಕವಿತಾ ಎಂ., ವ್ಯವಸ್ಥಾಪಕ ವೆಂಕಟೇಶ್ ರಾವ್, ಸಿಬ್ಬಂದಿ ಕೃಷ್ಣ ಪ್ರಸಾದ್ ಬಡಿಲ, ದಿವಾಕರ, ಪದ್ಮನಾಭ, ಪ್ರಮುಖರಾದ ಕರುಣಾಕರ ಸುವರ್ಣ, ಕಂಗ್ವೆ ವಿಶ್ವನಾಥ ಶೆಟ್ಟಿ, ಹರಿರಾಮಚಂದ್ರ, ಉಷಾಚಂದ್ರ ಮುಳಿಯ, ಸುಂದರ ಗೌಡ, ರಾಮಚಂದ್ರ ಮಣಿಯಾಣಿ, ಸುಧಾಕರ ಶೆಟ್ಟಿ, ಪ್ರಶಾಂತ್ ನೆಕ್ಕಿಲಾಡಿ, ಕೈಲಾರ್ ರಾಜಗೋಪಾಲ ಭಟ್, ಗೋಪಾಲ ಹೆಗ್ಡೆ, ಕೀರ್ತನ್ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.