ADVERTISEMENT

ಬಂಟ್ವಾಳ: ಜನಾರ್ದನ ಪೂಜಾರಿ ಮನೆಗೆ ವೀರಪ್ಪ ಮೊಯ್ಲಿ ಭೇಟಿ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2026, 2:03 IST
Last Updated 2 ಫೆಬ್ರುವರಿ 2026, 2:03 IST
   

ಬಂಟ್ವಾಳ: ಕಾಂಗ್ರೆಸ್ ಹಿರಿಯ ನಾಯಕ ಬಿ.ಜನಾರ್ಧನ ಪೂಜಾರಿ ಅವರ ಮನೆಗೆ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಭಾನುವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಉಭಯ ನಾಯಕರು ಹಿಂದಿನ ರಾಜಕೀಯ ಸನ್ನಿವೇಶಗಳ ಬಗ್ಗೆ ಮೆಲುಕು ಹಾಕಿದರು. 

ಈಗ ‘ವಿಶ್ವ ಸಂಸ್ಕೃತಿಯ ಮಾಯ' ಮೂರನೇ ಅಧ್ಯಾಯ ಬರೆಯುವ ಮೂಲಕ ಆರೋಗ್ಯ ಪಾಲನೆ ಮಾಡುತ್ತಿದ್ದೇನೆ ಎಂದು ಎಂ.ವೀರಪ್ಪ ಮೊಯ್ಲಿ ಪ್ರತಿಕ್ರಿಯಿಸಿದರು.

ADVERTISEMENT

ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಭಾಸ್ಕರ ಮೊಯ್ಲಿ, ಮಾಜಿ ಕಾರ್ಪೊರೇಟರ್ ಅಶೋಕ್ ಡಿ.ಕೆ., ಬುಡಾ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್, ರಿಸರ್ವ್ ಬ್ಯಾಂಕ್ ಮಾಜಿ ನಿರ್ದೇಶಕ ನವೀನ್ ಭಂಡಾರಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.