ಮಂಗಳೂರು: ಕಾಶೀಮಠಾಧೀಶ ಸಂಯಮಿಂದ್ರ ತೀರ್ಥ ಸ್ವಾಮೀಜಿ ಚಾತುರ್ಮಾಸ್ಯ ವ್ರತದ ಸಂದರ್ಭದಲ್ಲಿ ಸೋಮವಾರ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಿತು.
ಈ ಸಂದರ್ಭದಲ್ಲಿ ವಿಶೇಷ ಅಭಿಷೇಕ, ಅಷ್ಟಾವಧಾನ ಸೇವೆ, ಭರತನಾಟ್ಯ ಸೇವೆಗಳು ನಡೆದವು. ಸಂಯಮಿಂದ್ರ ತೀರ್ಥ ಸ್ವಾಮೀಜಿ ದೇವರಿಗೆ ಮಹಾಮಂಗಳಾರತಿ ನೆರವೇರಿಸಿದರು. ದೇವಳದ ಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ, ಸಾಹುಕಾರ್ ಕಿರಣ್ ಪೈ, ಸತೀಶ್ ಪ್ರಭು, ಕೆ. ಗಣೇಶ್ ಕಾಮತ್, ಜಗನ್ನಾಥ್ ಕಾಮತ್, ದೇವಳದ ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯ, ಚಾತುರ್ಮಾಸ್ಯ ಸಮಿತಿಯ ಗೌರವ ಅಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್, ಬಿ.ಆರ್. ಭಟ್, ನಾಮದೇವ್ ಮಲ್ಯ, ಗಣಪತಿ ಪೈ, ಸುರೇಶ್ ಕಾಮತ್, ಗುರುದತ್ ಕಾಮತ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.