ADVERTISEMENT

ಕಣ್ಮರೆಯಾದ ಉದ್ಯಮಿ ಸಿದ್ಧಾರ್ಥ ಪತ್ತೆಗೆ ತಡರಾತ್ರಿಯೂ ಶೋಧ, ಸಿಗದ ಸುಳಿವು

​ಪ್ರಜಾವಾಣಿ ವಾರ್ತೆ
Published 30 ಜುಲೈ 2019, 20:28 IST
Last Updated 30 ಜುಲೈ 2019, 20:28 IST
ತಡರಾತ್ರಿಯೂ ಬೋಟ್‌ಗಳನ್ನು ಬಳಸಿ ಶೋಧ ನಡೆಸಲಾಯಿತು. ಚಿತ್ರ : ಎಎನ್‌ಐ
ತಡರಾತ್ರಿಯೂ ಬೋಟ್‌ಗಳನ್ನು ಬಳಸಿ ಶೋಧ ನಡೆಸಲಾಯಿತು. ಚಿತ್ರ : ಎಎನ್‌ಐ   

ಮಂಗಳೂರು: ಸೋಮವಾರ ಸಂಜೆಯಿಂದ ನಿಗೂಢವಾಗಿ ಕಣ್ಮರೆಯಾಗಿರುವ ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ ಪತ್ತೆಗೆ ನಡೆಯುತ್ತಿರುವ ಶೋಧ ಕಾರ್ಯಾಚರಣೆ ಮಂಗಳವಾರ ತಡರಾತ್ರಿ ವರೆಗೆ ನಡೆಯಿತು.

ಎರಡು ಬೋಟುಗಳಲ್ಲಿ ಕಾರ್ಯಾಚರಣೆ ಮುಂದುವರಿದಿತ್ತು. ಕಾರ್ಯಾಚರಣೆ ಸ್ಥಳದಲ್ಲಿ ತಡರಾತ್ರಿವರೆಗೂ ಮಾಜಿ ಸಚಿವ ಯು.ಟಿ.ಖಾದರ್ ಕಾದುಕುಳಿತಿದ್ದರು.

ಘಟನಾ ಸ್ಥಳದಲ್ಲಿ ತಡರಾತ್ರಿಯೂ ಇದ್ದ ಮಾಜಿ ಸಚಿವ ಯು.ಟಿ. ಖಾದರ್

ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ನೇತ್ರಾವತಿ ಸೇತುವೆಯಿಂದ ಸಿದ್ಧಾರ್ಥ ಸೋಮವಾರ ಸಂಜೆ ನಾಪತ್ತೆಯಾಗಿದ್ದರು. ಪೊಲೀಸರು, ಕೋಸ್ಟ್‌ ಗಾರ್ಡ್‌, ಕರಾವಳಿ ಕಾವಲುಪಡೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ, ಅಗ್ನಿಶಾಮಕ ದಳ, ಗೃಹರಕ್ಷಕ ದಳ ಮತ್ತು ಮುಳುಗು ತಜ್ಞರು ಮಂಗಳವಾರ ಇಡೀ ದಿನ ಕಾರ್ಯಾಚರಣೆ ನಡೆಸಿದರೂ ಯಾವುದೇ ಸುಳಿವು ಲಭ್ಯವಾಗಿಲ್ಲ.

ADVERTISEMENT

* ಇವನ್ನೂ ಓದಿ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.