ಮಂಗಳೂರು: ನಗರದಲ್ಲಿ ಈಚೆಗೆ ನಡೆದ ಗಲಭೆಯ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಪೊಲೀಸರಿಗೆ ಬಹುಮಾನ ಘೋಷಿಸಿರುವ ಆದೇಶ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಆದರೆ, ಇದೊಂದು ನಕಲಿ ಪತ್ರವಾಗಿದ್ದು, ಕಿಡಿಗೇಡಿಗಳು ಇಂತಹ ಕೃತ್ಯ ಮಾಡುತ್ತಿದ್ದಾರೆ. ಸಾರ್ವಜನಿಕರು ಇಂತಹ ವದಂತಿಗಳಿಗೆ ಕಿವಿಗೊಡಬಾರದು ಎಂದು ಪೊಲೀಸ್ ಆಯುಕ್ತ ಡಾ. ಹರ್ಷ ಸ್ಪಷ್ಟಪಡಿಸಿದ್ದಾರೆ.
148 ಜನರಿಗೆ ಒಟ್ಟು ₹10 ಲಕ್ಷ ಬಹುಮಾನ ನೀಡಲಾಗಿದೆ ಎಂದು ಹೇಳಿರುವ ಈ ಪತ್ರದಲ್ಲಿ ಆದೇಶ ಸಂಖ್ಯೆಯಾಗಲಿ, ಅಧಿಕೃತ ಅಧಿಕಾರಿಯ ಸಹಿಯಾಗಲಿ ಇಲ್ಲ. ಹೀಗಾಗಿ ಇದೊಂದು ನಕಲಿ ಪತ್ರ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.