ADVERTISEMENT

'ಅರ್ಹರನ್ನು ಮತದಾರರ ಪಟ್ಟಿಗೆ ಸೇರಿಸಿ'

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2022, 14:22 IST
Last Updated 3 ಡಿಸೆಂಬರ್ 2022, 14:22 IST
ಕಾರ್ಯಕ್ರಮದಲ್ಲಿ ಡಾ.ಕುಮಾರ್‌ ಮಾತನಾಡಿದರು.
ಕಾರ್ಯಕ್ರಮದಲ್ಲಿ ಡಾ.ಕುಮಾರ್‌ ಮಾತನಾಡಿದರು.   

ಮಂಗಳೂರು: ‘18 ವರ್ಷ ತುಂಬಿದ್ದು ಇನ್ನೂ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಯಾಗದ ಅರ್ಹರನ್ನು ಗುರುತಿಸಿ ಮತದಾರರ ಪಟ್ಟಿಗೆ ಕೂಡಲೇ ಹೆಸರು ಸೇರಿಸಲು ಕ್ರಮ ಕೈಗೊಳ್ಳಬೇಕು’ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ .ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿ ಶನಿವಾರ ಏರ್ಪಡಿಸಿದ್ದ ‘ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2023’ ಮತ್ತು ‘ಮತದಾರರ ಸಾಕ್ಷರತೆ ಕಾರ್ಯಕ್ರಮ’ದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ತೃತೀಯ ಲಿಂಗಿಗಳು, ಬುಡಕಟ್ಟು ಜನಾಂಗದವರು, ಯುವ ಮತದಾರರು ಸೇರಿದಂತೆ ಇನ್ನೂ ಹಲವು ವರ್ಗಗಳ ಅರ್ಹರು ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೆ. ಅಂತಹವರನ್ನು ಹುಡುಕಿ ಆದಷ್ಟು ಬೇಗ ಅವರ ಹೆಸರುಗಳನ್ನು ಸೇರ್ಪಡೆಗೊಳಿಸುವುದು ಮತದಾರರ ಸಾಕ್ಷರತಾ ಸಂಘದ ಕರ್ತವ್ಯ’ ಎಂದರು.

ADVERTISEMENT

‘ಜಿಲ್ಲೆಯಲ್ಲಿ ಯುವ ಮತದಾರರ ಅನುಪಾತ ಸದ್ಯ ಕಡಿಮೆಯಿದೆ. ಅರ್ಹ ಯುವಜನರಿಗೆ ಮತದಾನದ ಮಹತ್ವದ ಅರಿವು ಮತ್ತು ಜಾಗೃತಿ ಮೂಡಿಸುವ ಕೆಲಸವಾಗಬೇಕು. ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಅಲೆದಾಡುವ ಅಗತ್ಯವಿಲ್ಲ. ವೋಟರ್ ಹೆಲ್ಪ್ ಲೈನ್ ಆ್ಯಪ್ ಅಥವಾ ನ್ಯಾಷನಲ್ ವೋಟರ್ ಸರ್ವಿಸ್ ಪೋರ್ಟಲ್ ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದು. ಇವುಗಳ ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು‘ ಎಂದು ಸಲಹೆ ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಯಣ್ಣ, ಕಾಲೇಜು ಶಿಕ್ಷಣದ ವಿಶೇಷಾಧಿಕಾರಿ ದೇವಿಪ್ರಸಾದ್, ಸಂಪನ್ಮೂಲ ವ್ಯಕ್ತಿ ಪ್ರಮೀಳಾ ರಾವ್, ನಗರದ ವಿಶ್ವವಿದ್ಯಾಲಯ ಕಾಲೇಜಿನ ಪ್ರಾಧ್ಯಾಪಕಿ ಭಾರತಿ ಪಿಲಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.