ADVERTISEMENT

ಕಿಂಡಿ ಅಣೆಕಟ್ಟೆಯಲ್ಲಿ ತ್ಯಾಜ್ಯ: ಕೃತಕ ನೆರೆಯ ಆತಂಕದಲ್ಲಿ ಸ್ಥಳೀಯರು

​ಪ್ರಜಾವಾಣಿ ವಾರ್ತೆ
Published 19 ಜೂನ್ 2021, 4:00 IST
Last Updated 19 ಜೂನ್ 2021, 4:00 IST
ಕಿಂಡಿ ಅಣೆಕಟ್ಟೆಯಲ್ಲಿ ಸಿಲುಕಿರುವ ತ್ಯಾಜ್ಯದ ರಾಶಿ
ಕಿಂಡಿ ಅಣೆಕಟ್ಟೆಯಲ್ಲಿ ಸಿಲುಕಿರುವ ತ್ಯಾಜ್ಯದ ರಾಶಿ   

ಉಜಿರೆ: ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿರುವ ಪರಿಣಾಮ, ಚಾರ್ಮಾಡಿ, ಮುಂಡಾಜೆ, ಕಲ್ಮಂಜ ಗ್ರಾಮದಲ್ಲಿ ಮೃತ್ಯುಂಜಯ ನದಿ ಹಾಗೂ ನೇತ್ರಾವತಿ ನದಿಗಳಿಗೆ ಅಡ್ಡಲಾಗಿ ನಿರ್ಮಿಸಿರುವ ಕಿಂಡಿ ಅಣೆಕಟ್ಟೆಗಳಲ್ಲಿ ತ್ಯಾಜ್ಯ ಸಿಲುಕಿಕೊಂಡಿದ್ದು, ಕೃತಕ ನೆರೆ ಉಂಟಾಗುವ ಆತಂಕ ಎದುರಾಗಿದೆ.

ಶುಕ್ರವಾರ ಮಳೆಯ ಪ್ರಮಾಣ ಇಳಿಮುಖವಾಗಿದೆ. ನೀರಿನ ಹರಿವು ಕಡಿಮೆಯಾದಲ್ಲಿ ತ್ಯಾಜ್ಯಗಳನ್ನು ತೆರವುಗೊಳಿಸಬೇಕು. ಇಲ್ಲವಾದಲ್ಲಿ ಮತ್ತೆ ನಿರಂತರ ಮಳೆ ಸುರಿಯಲಾರಂಭಿಸಿದರೆ, ಕೃತಕ ಪ್ರವಾಹ ಎದುರಾಗಬಹುದು ಎಂದು ಸ್ಥಳೀಯರು ವಿನಂತಿಸಿದ್ದಾರೆ.

ಅಡಿಕೆ ತೋಟಗಳಿಗೆ ಬೋರ್ಡೋ ಮಿಶ್ರಣ ಸಿಂಪರಣೆ ಪ್ರಾರಂಭವಾಗಿದೆ. ಕೆಲವು ತೋಟಗಳಲ್ಲಿ ಕೊಳೆ ರೋಗದ ಲಕ್ಷಣಗಳು ಕಂಡು ಬಂದಿದೆ ಎಂದು ರೈತರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.