ಮಂಗಳೂರು: ‘ನಮ್ಮ ಕೆಲಸಗಳು ಮಾತನಾಡಬೇಕು. ಮಾತನಾಡುತ್ತಿವೆ’ ಎಂದು ಮಲೆನಾಡು ಹಾಗೂ ಕರಾವಳಿಯಲ್ಲಿ ಕಾಲುಸಂಕ ನಿರ್ಮಾಣ ಯೋಜನೆ ಅನುಷ್ಠಾನದ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವಿಟರ್ನಲ್ಲಿ ಪ್ರತಿಕ್ರಿಯಿಸಿದ್ದಾರೆ.
‘ಪ್ರಜಾವಾಣಿ’ಯ ಶುಕ್ರವಾರದ ಸಂಚಿಕೆಯಲ್ಲಿ ಪ್ರಕಟವಾದ ‘36 ಕಡೆ ಕಾಲುಸಂಕ: ಕಾಮಗಾರಿ ಪ್ರಗತಿ’ ವಿಶೇಷ ವರದಿಯ ತುಣುಕನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ‘ಕಾಲುಸಂಕ ದಾಟುತ್ತಿದ್ದ ವೇಳೆ ಶಾಲಾ ಬಾಲಕಿಯೊಬ್ಬಳು ತೊರೆಗೆ ಬಿದ್ದು ಮೃತಪಟ್ಟ ಸುದ್ದಿ ಅಂದು ನನ್ನ ಮನ ಕಲಕಿತ್ತು. ಮಲೆನಾಡು, ಕರಾವಳಿಯಲ್ಲಿ ಈ ಸಮಸ್ಯೆ ನಿವಾರಿಸಲು ಅಂದು ಬಜೆಟ್ನಲ್ಲಿ ‘ಶಾಲಾ ಸಂಪರ್ಕ ಸೇತು’ ಯೋಜನೆ ಘೋಷಿಸಿದ್ದೆ. ಅದು ಯಶಸ್ವಿಯಾಗಿದೆ. ವಿದ್ಯಾರ್ಥಿಗಳಿಗೆ ನೆರವಾಗಿದೆ’ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.