ADVERTISEMENT

ಕಂಚಿನ ಪದಕ ಗೆದ್ದ ಗುರುರಾಜ್ ಪೂಜಾರಿಗೆ ಮಂಗಳೂರಿನಲ್ಲಿ ಸ್ವಾಗತ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2022, 5:29 IST
Last Updated 8 ಆಗಸ್ಟ್ 2022, 5:29 IST
ಕಾಮನ್‌ವೆಲ್ತ್ ಗೇಮ್ಸ್ -ವೇಟ್‌ಲಿಫ್ಟಿಂಗ್‌ನಲ್ಲಿ ಕಂಚಿನ ಪದಕ ಗೆದ್ದು ತವರಿಗೆ ಬಂದ ಕುಂದಾಪುರದ ಗುರುರಾಜ್ ಪೂಜಾರಿ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌, ಶಾಸಕ ಉಮಾನಾಥ ಕೋಟ್ಯಾನ್‌ ಅಭಿನಂದಿಸಿದರು (ಎಡಚಿತ್ರ)ಗುರುರಾಜ್‌ ಪೂಜಾರಿ ಅವರನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಭಿನಂದಿಸಿದರು.
ಕಾಮನ್‌ವೆಲ್ತ್ ಗೇಮ್ಸ್ -ವೇಟ್‌ಲಿಫ್ಟಿಂಗ್‌ನಲ್ಲಿ ಕಂಚಿನ ಪದಕ ಗೆದ್ದು ತವರಿಗೆ ಬಂದ ಕುಂದಾಪುರದ ಗುರುರಾಜ್ ಪೂಜಾರಿ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌, ಶಾಸಕ ಉಮಾನಾಥ ಕೋಟ್ಯಾನ್‌ ಅಭಿನಂದಿಸಿದರು (ಎಡಚಿತ್ರ)ಗುರುರಾಜ್‌ ಪೂಜಾರಿ ಅವರನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಭಿನಂದಿಸಿದರು.   

ಮಂಗಳೂರು: ಇಂಗ್ಲೆಂಡ್‌ನ ಬರ್ಮಿಂಗ್ ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ -2022 ವೇಟ್‌ ಲಿಫ್ಟಿಂಗ್‌ನಲ್ಲಿ ಕಂಚಿನ ಪದಕ ಗೆದ್ದು ತವರಿಗೆ ಬಂದ ಕುಂದಾಪುರದ ಗುರುರಾಜ್ ಪೂಜಾರಿ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾನುವಾರ ಸ್ವಾಗತಿಸಲಾಯಿತು.

ಸಂಸದ ನಳಿನ್ ಕುಮಾರ್ ಕಟೀಲ್‌, ಶಾಸಕರಾದ ಡಾ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್ ಆತ್ಮೀಯವಾಗಿ ಅಭಿನಂದಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಿ.ವೀರೇಂದ್ರ ಹೆಗ್ಗಡೆ ಅವರೂ ಅಭಿನಂದಿಸಿದರು.

ಕಾಮನ್ ವೆಲ್ತ್ ಗೇಮ್ಸ್ -2022ರಲ್ಲಿ ವೇಟ್‌ಲಿಫ್ಟಿಂಗ್‌ನಲ್ಲಿ 61 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಗುರುರಾಜ್ ಸತತ ಎರಡನೇ ಬಾರಿಗೆ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪಾಲ್ಗೊಂಡಿದ್ದಾರೆ. ಕಳೆದ ಬಾರಿ ಪುರುಷರ 56 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿರುವ ಅವರು ಬೆಳ್ಳಿಯ ಪದಕ ಗೆದ್ದಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.