ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪ ಸೋಮವಾರ ಸಂಜೆ ಕಾಡಾನೆ ಓಡಾಡಿದೆ.
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪ ಸೋಮವಾರ ಸಂಜೆ ಕಾಡಾನೆ ಓಡಾಡಿದೆ.
ದೇವರಗದ್ದೆ ಅರಣ್ಯ ಪ್ರದೇಶದಿಂದ ಬಂದ ಒಂಟಿ ಕಾಡಾನೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯಾಸಮಂದಿರ ಬಳಿಯಿಂದ ಸುಬ್ರಹ್ಮಣ್ಯ ಮಠದ ಸಮೀಪದ ಮೂಲಕ ಸಂಚರಿಸಿ, ಮತ್ತೆ ಅರಣ್ಯ ಭಾಗಕ್ಕೆ ತೆರಳಿದೆ.
ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕಾಡಾನೆ ಅರಣ್ಯದೊಳಗೆ ಸೇರಿರುವ ಬಗ್ಗೆ ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕಾಡಾನೆ ಮೇಲೆ ನಿಗಾ ಇಡಲು ಅರಣ್ಯ ಇಲಾಖೆಯು ತಂಡ ರಚಿಸಿದೆ. ಕಾಡಾನೆ ಕಂಡುಬಂದರೆ ಮಾಹಿತಿ ನೀಡಬೇಕು ಎಂದು ಪುತ್ತೂರು ಉಪ ವಿಭಾಗಾಧಿಕಾರಿ ಜುಬಿನ್ ಮೊಹಪಾತ್ರ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.