ಮಂಗಳೂರು: ನಗರ ಹೊರವಲಯದ ಕುಳಾಯಿ ಸಮೀಪ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ಮೃತ ಮಹಿಳೆಯನ್ನು ಕೃಷ್ಣಾಪುರ ಚೊಕ್ಕಬೆಟ್ಟುವಿನ, ಸದ್ಯ ನಗರದ ಬೋಂದೆಲ್ನಲ್ಲಿ ವಾಸಿಸುತ್ತಿದ್ದ ಸುಹಾನಾ (26) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಸುಹಾನಾರ ಸಹೋದರಿ ಫಾತಿಮಾ ಶೌರೀನ್, ಸಹೋದರರಾದ ರಾಹಿಲ್ ಶಮೀಮ್ ಮತ್ತು ರಾಝಿಕ್ ಶಹಾನ್ ಎಂಬವರಿದ್ದು, ಅವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಹಾನಾ ಅವರಿಗೆ ಪತಿ ಮತ್ತು ಇಬ್ಬರು ಪುತ್ರರು ಇದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.