ಮಂಗಳೂರು: ಬಂಟ್ವಾಳ ತಾಲ್ಲೂಕಿನ ಪಿಲಾತಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ ಸಾರ್ವಜನಿಕ ರಸ್ತೆಯ ಮೇಲೆ 'ಚಡ್ಡಿಗಳೇ ಎಚ್ಚರಿಕೆ- PFI ನಾವು ಮರಳಿ ಬರುತ್ತೇವೆ' ಎಂಬ ಬರಹ ಬರೆದಿರುವುದನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.
ನೈನಾಡು- ಗೋಳಿಯಂಗಡಿ ಕಡೆಗೆ ಹಾದು ಹೋಗುವ ಸಾರ್ವಜನಿಕ ಡಾಂಬರು ರಸ್ತೆಯಲ್ಲಿ ಯಾರೋ ಕಿಡಿಗೇಡಿಗಳು ಬಿಳಿ ಬಣ್ಣದ ಸ್ಪ್ರೇ ಪೇಂಟ್ ನಿಂದ ಈ ಬರಹ ಬರೆದಿದ್ದು, ಪುಂಜಾಲಕಟ್ಟೆ ಪಿಎಸ್ ಐ ಸುತೇಶ್ ಕೆಪಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.