ADVERTISEMENT

ಯಕ್ಷಗಾನ ಕಲಾವಿದ ಶಂಭುಕುಮಾರ್ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2022, 11:41 IST
Last Updated 18 ಆಗಸ್ಟ್ 2022, 11:41 IST
ಶಂಭುಕುಮಾರ್
ಶಂಭುಕುಮಾರ್   

ಮೂಲ್ಕಿ(ದಕ್ಷಿಣ ಕನ್ನಡ): ಕಟೀಲು ಯಕ್ಷಗಾನ ಮೇಳದ ಕಲಾವಿದ ಕಿನ್ನಿಗೋಳಿ ಬಳಿಯ ಕೊಡೆತ್ತೂರು ನಿವಾಸಿ ಶಂಭುಕುಮಾರ್ (48) ಗುರುವಾರ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.

ಎರಡೂವರೆ ದಶಕಗಳಿಂದ ಯಕ್ಷಗಾನ ಕಲಾವಿದರಾಗಿ ಪುತ್ತೂರು, ಬಪ್ಪನಾಡು ಮೇಳದಲ್ಲಿ ದುಡಿದು, ಹೊಗೆಗುಡ್ಡೆ ಉಮಾಮಹೇಶ್ವರ ದೇವಸ್ಥಾನದ ಚಿಕ್ಕಮೇಳದ ವ್ಯವಸ್ಥಾಪಕರಾಗಿ ಕೆಲಸ ಮಾಡಿದ್ದರು.

ಪ್ರಸ್ತುತ ಕಟೀಲು ಮೇಳದಲ್ಲಿ ಕಲಾವಿದರಾಗಿದ್ದ ಅವರು ತಮ್ಮ ನಿರ್ಮಾಣದ ಹಂತದಲ್ಲಿರುವ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಮೂಲ್ಕಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.