ಉಜಿರೆ: ಧರ್ಮಸ್ಥಳದ ಯಕ್ಷಗಾನ ಮಂಡಳಿಯ ಸೇವಾ ಹರಕೆ ಬಯಲಾಟ ಪ್ರದರ್ಶನದ ತಿರುಗಾಟ ಶನಿವಾರ ಆರಂಭವಾಯಿತು.
ಧರ್ಮಸ್ಥಳದಲ್ಲಿ ಶನಿವಾರ ಛತ್ರದ ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮೇಳದ ಗಣಪತಿ ದೇವರ ಮೂರ್ತಿಯ ಮೆರವಣಿಗೆ ನಡೆಸಲಾಯಿತು. ಗಣಹೋಮ ಮತ್ತು ಮಹಾಪೂಜೆ ನೆರವೇರಿಸಲಾಯಿತು.
ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ.ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಮೇಳದ ವ್ಯವಸ್ಥಾಪಕರಾದ ಗಿರೀಶ್ ಹೆಗ್ಡೆ, ಪುಷ್ಪರಾಜ ಶೆಟ್ಟಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.