ADVERTISEMENT

ಶಾಂಭವಿ ನದಿಯಲ್ಲಿ ಮುಳುಗಿ ಯುವಕ ಸಾವು: ಇಬ್ಬರ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2020, 11:42 IST
Last Updated 6 ಸೆಪ್ಟೆಂಬರ್ 2020, 11:42 IST

ಮಂಗಳೂರು: ತಾಲ್ಲೂಕಿನ ಕಿನ್ನಿಗೋಳಿ ಸಮೀಪದ ಕರ್ನಿರೆಯಲ್ಲಿ ಭಾನುವಾರ ಶಾಂಭವಿ ನದಿಗೆ ಈಜಲು ಇಳಿದಿದ್ದ ಮೂವರು ಯುವಕರ ಪೈಕಿ ಒಬ್ಬ ಮೃತಪಟ್ಟಿದ್ದು, ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ. ‌

ಬೆಂಗಳೂರಿನ ಅನಿಲ್ (32) ಮೃತಪಟ್ಟ ಯುವಕ. ಬೆಂಗಳೂರಿನಿಂದ ಬಂದಿದ್ದ ಏಳು ಮಂದಿ ಯುವಕರ ಪೈಕಿ ಮೂವರು ಕರ್ನಿರೆ ಬಳಿ ಶಾಂಭವಿ ನದಿಯಲ್ಲಿ ಈಜಲು ಇಳಿದಿದ್ದರು. ಮೂವರೂ ನದಿ ನೀರಿನ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ತಕ್ಷಣವೇ ಸ್ಥಳೀಯರು ನೆರವಿಗೆ ಬಂದಿದ್ದು, ಇಬ್ಬರನ್ನು ಸ್ಥಳಿಯರು ರಕ್ಷಿಸಲು ಸಾಧ್ಯವಾಗಿದೆ. ಮೂಲ್ಕಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT