ADVERTISEMENT

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2022, 15:51 IST
Last Updated 28 ಏಪ್ರಿಲ್ 2022, 15:51 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಗಳೂರು: ಇಲ್ಲಿನ ಎಮ್ಮೆಕೆರೆಯಲ್ಲಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಗುರುವಾರ ನಡೆದಿದೆ.

ಹೊಯಿಗೆಬಜಾರ್ ನಿವಾಸಿ ರಾಹುಲ್ (25) ಕೊಲೆಯಾದ ಯುವಕ. ಹಳೇ ದ್ವೇಷದ ಹಿನ್ನಲೆಯಲ್ಲಿ ದುಷ್ಕರ್ಮಿಗಳ ತಂಡ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಎಮ್ಮೆಕೆರೆ ಪ್ರದೇಶದಲ್ಲಿ ನಡೆದಕೋಳಿ ಅಂಕಕ್ಕೆ ತೆರಳಿ ಮನೆಗೆ ವಾಪಸಾಗುತ್ತಿದ್ದ ವೇಳೆ ಕಾದುಕುಳಿತಿದ್ದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ರಾಹುಲ್‌ನನ್ನು ಕೊಲೆ ಮಾಡಿದೆ ಎನ್ನಲಾಗಿದೆ. ರಾಹಲ್ ರೌಡಿಶೀಟರ್ ಆಗಿದ್ದು, ಈತನ ವಿರುದ್ಧ ಮೂರು ಪ್ರಕರಣಗಳು ಇವೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT