ADVERTISEMENT

ಯುಟ್ಯೂಬ್: ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪ; ಜಯಂತ್ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2025, 4:56 IST
Last Updated 15 ಅಕ್ಟೋಬರ್ 2025, 4:56 IST

ಮಂಗಳೂರು: ಯುಟ್ಯೂಬ್ ನಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದ ಮೇಲೆ ಜಯಂತ್ ಟಿ ಎಂಬುವವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'ಬಂಟ್ವಾಳ ಡಿವೈಎಸ್ಪಿ ನಿಯಮನುಸಾರ ಕಾನೂನಾತ್ಮಕವಾಗಿ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಲು ಪುತ್ತೂರು ಉಪವಿಭಾಗಾಧಿಕಾರಿಗೆ ಪ್ರಸ್ತಾವ ಸಲ್ಲಿಸಿದ್ದರು. ಸತ್ಯಾಸತ್ಯತೆ ತಿಳಿದಿದ್ದರೂ ಅಪೂರ್ಣವಾದ ಮಾಹಿತಿಯೊಂದಿಗೆ ಸೌಜನ್ಯಾ ಪರ ಹೋರಾಟಕ್ಕೆ ಪೊಲೀಸರು ತೊಂದರೆ ಮಾಡುತ್ತಿದ್ದಾರೆ ಎಂಬಂತೆ ಬಿಂಬಿಸಿ, ಇದೊಂದು ಷಡ್ಯಂತ್ರ ಎಂದು ಜಯಂತ್ ಯುಟ್ಯೂಬ್ ನಲ್ಲಿ ಸುಳ್ಳು ಸುದ್ದಿ ಹರಿಬಿಟ್ಟಿದ್ದರು' ಎಂದು ಪೊಲೀಸರು ತಿಳಿಸಿದ್ದಾರೆ‌.

ಈ ಬಗ್ಗೆ ಪ್ರಕರಣ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.