ದಾವಣಗೆರೆ: ತಾಲ್ಲೂಕಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜೂನ್ 25ರ ಒಳಗೆ ಶಿಶು ಯೋಜನಾಧಿಕಾರಿಗಳ ಕಚೇರಿ, ವಿದ್ಯಾನಗರ- ಈ ವಿಳಾಸಕ್ಕೆ ತಲುಪಿಸಬೇಕು ಎಂದು ಪ್ರಕಟಣೆ ಕೋರಿದೆ.
ಅವಧಿ ವಿಸ್ತರಣೆ
ಯಶಸ್ವಿನಿ ಸಹಕಾರಿ ರೈತರ ಆರೋಗ್ಯ ರಕ್ಷಣಾ ಯೋಜನೆ ಅಡಿ 2011-12ನೇ ಸಾಲಿನ ಫಲಾನುಭವಿಗಳ ನೋಂದಣಿ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ ಎಂದು ಸಹಕಾರ ಸಂಘಗಳ ಉಪ ನಿಬಂಧಕ ಬಿ. ಕುಬೇರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.