ADVERTISEMENT

ಕಣದಿಂದ ಹಿಂದೆ ಸರಿಯಲು ರೂ. 10 ಕೋಟಿ ಆಮಿಷ

ರೇಣುಕಾಚಾರ್ಯ ವಿರುದ್ಧ ಶಾಂತನಗೌಡ ಆರೋಪ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2013, 4:56 IST
Last Updated 12 ಏಪ್ರಿಲ್ 2013, 4:56 IST

ಹೊನ್ನಾಳಿ: ಚುನಾವಣಾ ಕಣದಿಂದ ಹಿಂದೆ ಸರಿದರೆ ರೂ. 10 ಕೋಟಿ ನೀಡುವುದಾಗಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಮಗೆ ಆಮಿಷ ಒಡ್ಡಿದ್ದರು ಎಂದು ಹೊನ್ನಾಳಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಜಿ. ಶಾಂತನಗೌಡ ಗಂಭೀರ ಆರೋಪ ಮಾಡಿದರು.

ಇಲ್ಲಿಗೆ ಸಮೀಪದ ಗೊಲ್ಲರಹಳ್ಳಿಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಕಣದಿಂದ ಹಿಂದೆ ಸರಿಯುವಂತೆ ತಮಗೆ ಮಧ್ಯವರ್ತಿ ಮೂಲಕ ಆಮಿಷ ಒಡ್ಡಲಾಯಿತು. ಒಬ್ಬ ಅಭ್ಯರ್ಥಿಗೆ ಈ ರೀತಿ ಆಮಿಷ ಒಡ್ಡುವುದನ್ನು ನೋಡಿದರೆ ರೇಣುಕಾಚಾರ್ಯ ಯಾವ ಮಟ್ಟದ ಭ್ರಷ್ಟಾಚಾರ ಮಾಡಿ ಎಷ್ಟು ಹಣ ಸಂಪಾದಿಸಿರಬಹುದು? ಇಂತಹವರಿಗೆ ಮತದಾರರು ಸೂಕ್ತ ಪಾಠ ಕಲಿಸಬೇಕು ಎಂದು ಕರೆ ನೀಡಿದರು. 

ರೇಣುಕಾಚಾರ್ಯ ತಾಲ್ಲೂಕಿನ ಹಳ್ಳಿಗಳಿಗೆ ಭೇಟಿ ನೀಡಿ ಸ್ತ್ರೀ ಶಕ್ತಿ ಸಂಘಗಳು, ಮಹಿಳೆಯರಿಗೆ ಅನುದಾನ ಕೊಡಿಸುವ ಭರವಸೆ ನೀಡುತ್ತಿದ್ದಾರೆ. ಹಣ, ಹೆಂಡ, ಸೀರೆ, ಮೂಗುತಿ ವಿತರಿಸುವ ಮೂಲಕ ಮತ್ತೊಮ್ಮೆ ಜನರಿಗೆ ಮೋಸ ಮಾಡಲು ಮುಂದಾಗಿದ್ದಾರೆ. ಇಂತಹ ರಾಜಕಾರಣಿಗಳನ್ನು ಕ್ಷೇತ್ರದಿಂದ ಹೊರಗಿಡುವ ಮೂಲಕ ಕ್ಷೇತ್ರದ ಪಾವಿತ್ರ್ಯತೆ, ಮರ್ಯಾದೆ ಉಳಿಸಬೇಕು ಎಂದು ವಿನಂತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.