ADVERTISEMENT

ಚಿಕ್ಕಹಾಲಿವಾಣ: ವೈಭವದ ವೀರಭದ್ರೇಶ್ವರ ಕೆಂಡದಾರ್ಚನೆ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2011, 12:15 IST
Last Updated 20 ಫೆಬ್ರುವರಿ 2011, 12:15 IST

ಹೊನ್ನಾಳಿ: ತಾಲ್ಲೂಕಿನ ಚಿಕ್ಕಹಾಲಿವಾಣ ಗ್ರಾಮದಲ್ಲಿ ಶನಿವಾರ ವೀರಭದ್ರಸ್ವಾಮಿ ಗುಗ್ಗಳ ಹಾಗೂ ಕೆಂಡದರ್ಚನೆ ಕಾರ್ಯಕ್ರಮಗಳು ವೈಭವದಿಂದ ನಡೆದವು.
ಶನಿವಾರ ಬೆಳಿಗ್ಗೆ 6ರಿಂದ 10ರವರೆಗೆ ಸ್ವಾಮಿಯ ಗುಗ್ಗಳ ನಡೆಯಿತು. ರಾಣೇಬೆನ್ನೂರಿನ ಪುರವಂತರ ಖಡ್ಗ ಪ್ರದರ್ಶನ ಜನಮನ ಸೂರೆಗೊಂಡಿತು.

ತಾಲ್ಲೂಕಿನ ವಿವಿಧೆಡೆಗಳಿಂದ ಹಾಗೂ ರಾಜ್ಯದ ಅನೇಕ ಭಾಗಗಳಿಂದ ಸಹಸ್ರಾರುಪಾಲ್ಗೊಂಡಿದ್ದರು. ಎಂ.ಪಿ. ರಾಜು, ಜಿ.ಪಂ. ಸದಸ್ಯೆ ಉಷಾ ಅಶೋಕ್, ಯಕ್ಕನಹಳ್ಳಿ ಗ್ರಾ.ಪಂ. ಅಧ್ಯಕ್ಷ ಎಸ್. ಮಹಾದೇವಪ್ಪ, ಸದಸ್ಯ ರಮೇಶ್‌ನಾಯ್ಕ, ಶಿವಮೊಗ್ಗ ಜಿಲ್ಲಾ ಪರಿಷತ್ ಮಾಜಿ ಉಪಾಧ್ಯಕ್ಷ ತಿಪ್ಪಾನಾಯ್ಕ ಸೇರಿದಂತೆ ಗ್ರಾಮದ ಪ್ರಮುಖರು ಇದ್ದರು.
ಇಂದು ರಥೋತ್ಸವ: ಗ್ರಾಮದ ಶ್ರೀವೀರಭದ್ರಸ್ವಾಮಿ ರಥೋತ್ಸವ ಫೆ. 20ರಂದು ನಡೆಯಲಿದೆ. ನಂತರ ಓಕುಳಿ ನಡೆಯಲಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.