ADVERTISEMENT

ಬಿರುಗಾಳಿಗೆ ಹಾರಿದ ಮನೆಗಳ ಚಾವಣಿ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2018, 6:58 IST
Last Updated 17 ಏಪ್ರಿಲ್ 2018, 6:58 IST
ಭಾರಿ ಗಾಳಿಯಿಂದ ಹಾನಿಗೊಳಗಾದ ಮನೆ
ಭಾರಿ ಗಾಳಿಯಿಂದ ಹಾನಿಗೊಳಗಾದ ಮನೆ   

ಹರಪನಹಳ್ಳಿ: ಭಾನುವಾರ ಸಂಜೆ ಬೀಸಿದ ಭಾರಿ ಬಿರುಗಾಳಿಗೆ ತಾಲ್ಲೂಕಿನ ಅರಸನಾಳು ನವಗ್ರಾಮದ ಒಂಬತ್ತು ಮನೆಗಳ ಚಾವಣಿ ಹಾರಿಹೋಗಿದ್ದು, ಅಪಾರ ಪ್ರಮಾಣದ ನಷ್ಟವಾಗಿದೆ.

ಯರಬಳ್ಳಿ ಮಂಜುಳಮ್ಮ, ಕರಿಯಮ್ಮ ನೆರ್ಕಿ, ಹಡಪದ ಗಂಗಮ್ಮ, ಕುರುವಪ್ಪನವರ ಬಸಮ್ಮ, ಸುಶೀಲಮ್ಮ ಭೀಮಪ್ಪ, ಹುಲಿಕಟ್ಟಿ ನಾಗರಾಜ, ನಿಂಗನಗೌಡರ ಮಾಳಮ್ಮನವರ, ಕಮ್ಮಾರ ಶಾಂತಮ್ಮ, ಬುಕಪ್ಪರ ಬಸಪ್ಪ ಅವರ ಮನೆ ಚಾವಣಿ ಕಿತ್ತು ಹೋಗಿದೆ. ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಸಂಜೆ 6.30ರ ಸುಮಾರಿಗೆ ಭಾರಿ ಪ್ರಮಾಣದಲ್ಲಿ ಬೀಸಿದ ಗಾಳಿಯಿಂದಾಗಿ ಬೇವಿನಕಟ್ಟೆಯ ಮರ ಟೊಂಗೆ ಮುರಿದು ಬಿದ್ದಿದೆ. ಮಳೆ ಪ್ರಮಾಣಕ್ಕಿಂತ ಹೆಚ್ಚು ಬಿರುಗಾಳಿ ಜೋರಾಗಿತ್ತು. ಅರಸನಾಳು ಗ್ರಾಮದಲ್ಲಿರುವ ರಂಗಮಂದಿರದ ಚಾವಣಿ ಕಿತ್ತು‌ಹೋಗಿದೆ.

ADVERTISEMENT

ಸ್ಥಳಕ್ಕೆ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಆನಂದ ನಾಯ್ಕ, ಗ್ರಾಮ ಲೆಕ್ಕಿಗ ರಾಜಪ್ಪ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಸುಧಾಕರ ಬಂದು ಪರಿಶೀಲಿಸಿದ್ದಾರೆ.

ತಂಪೆರೆದ ಮಳೆ

ಸಂತೇಬೆನ್ನೂರು: ಸಂತೇಬೆನ್ನೂರು ಸೇರಿದಂತೆ ಹೋಬಳಿಯ ಹಲವೆಡೆ ಭಾನುವಾರ ಸಂಜೆ ಮಳೆಯ ಸಿಂಚನ ತಂಪೆರೆಯಿತು. ಒಂದು ವಾರದಿಂದ ತಾಪಮಾನ ಹೆಚ್ಚಿತ್ತು. ಬಿರು ಬಿಸಿಲಿಗೆ ಬಳಲಿದ ಮನಗಳಿಗೆ ಮಳೆ ಸಂತಸ ನೀಡಿತು. ಕೇವಲ 15 ನಿಮಿಷ ಕೆಲವೆಡೆ ಉತ್ತಮ ಮಳೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.